<p><strong>ಬೆಂಗಳೂರು: </strong>‘ರಾಜ್ಯದಲ್ಲಿ ಒಂಬತ್ತನೇ ತರಗತಿವರೆಗಿನ ಪಠ್ಯಗಳಲ್ಲಿ ಯಾವುದೇ ಕಡಿತ ಮಾಡದೆ, ಅದನ್ನು ಸಂಪೂರ್ಣವಾಗಿ ಕಲಿಸಲು ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿರುವ ಸರ್ಕಾರದ ನಡೆ ಸೂಕ್ತವಾಗಿದೆ’ ಎಂದು ಶಿಕ್ಷಣ ತಜ್ಞ, ‘ಮಕ್ಕಳ ನಡೆ-ಶಾಲೆಯ ಕಡೆ’ ಅಭಿಯಾನದ ನಿರಂಜನಾರಾಧ್ಯ ವಿ.ಪಿ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸರ್ಕಾರದ ಈ ನಿರ್ಧಾರಕ್ಕೆ ‘ಮಕ್ಕಳ ನಡೆ - ಶಾಲೆಯ ಕಡೆ’ ಅಭಿಯಾನದ ಬೆಂಬಲವಿದೆ. ಮಕ್ಕಳು ಈಗಾಗಲೇ 9 ತಿಂಗಳು ಕಲಿಕೆಯಿಂದ ವಂಚಿತರಾಗಿ ಹಲವನ್ನು ಮರೆತಿರುವ ಸಾಧ್ಯತೆಗಳಿವೆ. ಹೀಗಿರುವಾಗ, ಪಠ್ಯಗಳನ್ನು ಕಡಿತ ಮಾಡಿ ಮುಂದಿನ ತರಗತಿಗಳಿಗೆ ದೂಡಿದರೆ ಅವರ ಭವಿಷ್ಯಕ್ಕೆ ಇನ್ನಷ್ಟು ಹಾನಿ ಆಗಲಿದೆ. ಜೊತೆಗೆ ಗ್ರಾಮೀಣ ಮತ್ತು ನಗರದಲ್ಲಿನ ಮಕ್ಕಳ ಕಲಿಕೆಯ ಅಂತರವನ್ನು ಮತ್ತಷ್ಟು ಹೆಚ್ಚಿಸಲಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಪ್ರತಿಯೊಂದು ಮಗು ಆಯಾ ತರಗತಿಯಲ್ಲಿ ನಿಗದಿತ ಕಲಿಕಾ ಮಟ್ಟ ಮುಟ್ಟುವುದು ನ್ಯಾಯಸಮ್ಮತ ಹಕ್ಕಿನ ಭಾಗ. ಈ ಉದ್ದೇಶದಿಂದ ಶೈಕ್ಷಣಿಕ ಪ್ರಾಧಿಕಾರವಾದ ಡಿಎಸ್ಇಆರ್ಟಿ ಸೂಕ್ತ ಬದಲಾವಣೆ ಮಾಡಿದೆ. ಮಕ್ಕಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಎಲ್ಲ ಪಾಠಗಳನ್ನು ಕಲಿಸುವುದೇ ಸರಿಯಾದ ನಿರ್ಧಾರ. ಎಲ್ಲ ಶಿಕ್ಷಕರೂ ಈ ಕಾರ್ಯಕ್ಕೆ ಸಹಕರಿಸುವ ವಿಶ್ವಾಸವಿದೆ’ ಎಂದೂ ಅವರು ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜ್ಯದಲ್ಲಿ ಒಂಬತ್ತನೇ ತರಗತಿವರೆಗಿನ ಪಠ್ಯಗಳಲ್ಲಿ ಯಾವುದೇ ಕಡಿತ ಮಾಡದೆ, ಅದನ್ನು ಸಂಪೂರ್ಣವಾಗಿ ಕಲಿಸಲು ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿರುವ ಸರ್ಕಾರದ ನಡೆ ಸೂಕ್ತವಾಗಿದೆ’ ಎಂದು ಶಿಕ್ಷಣ ತಜ್ಞ, ‘ಮಕ್ಕಳ ನಡೆ-ಶಾಲೆಯ ಕಡೆ’ ಅಭಿಯಾನದ ನಿರಂಜನಾರಾಧ್ಯ ವಿ.ಪಿ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸರ್ಕಾರದ ಈ ನಿರ್ಧಾರಕ್ಕೆ ‘ಮಕ್ಕಳ ನಡೆ - ಶಾಲೆಯ ಕಡೆ’ ಅಭಿಯಾನದ ಬೆಂಬಲವಿದೆ. ಮಕ್ಕಳು ಈಗಾಗಲೇ 9 ತಿಂಗಳು ಕಲಿಕೆಯಿಂದ ವಂಚಿತರಾಗಿ ಹಲವನ್ನು ಮರೆತಿರುವ ಸಾಧ್ಯತೆಗಳಿವೆ. ಹೀಗಿರುವಾಗ, ಪಠ್ಯಗಳನ್ನು ಕಡಿತ ಮಾಡಿ ಮುಂದಿನ ತರಗತಿಗಳಿಗೆ ದೂಡಿದರೆ ಅವರ ಭವಿಷ್ಯಕ್ಕೆ ಇನ್ನಷ್ಟು ಹಾನಿ ಆಗಲಿದೆ. ಜೊತೆಗೆ ಗ್ರಾಮೀಣ ಮತ್ತು ನಗರದಲ್ಲಿನ ಮಕ್ಕಳ ಕಲಿಕೆಯ ಅಂತರವನ್ನು ಮತ್ತಷ್ಟು ಹೆಚ್ಚಿಸಲಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಪ್ರತಿಯೊಂದು ಮಗು ಆಯಾ ತರಗತಿಯಲ್ಲಿ ನಿಗದಿತ ಕಲಿಕಾ ಮಟ್ಟ ಮುಟ್ಟುವುದು ನ್ಯಾಯಸಮ್ಮತ ಹಕ್ಕಿನ ಭಾಗ. ಈ ಉದ್ದೇಶದಿಂದ ಶೈಕ್ಷಣಿಕ ಪ್ರಾಧಿಕಾರವಾದ ಡಿಎಸ್ಇಆರ್ಟಿ ಸೂಕ್ತ ಬದಲಾವಣೆ ಮಾಡಿದೆ. ಮಕ್ಕಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಎಲ್ಲ ಪಾಠಗಳನ್ನು ಕಲಿಸುವುದೇ ಸರಿಯಾದ ನಿರ್ಧಾರ. ಎಲ್ಲ ಶಿಕ್ಷಕರೂ ಈ ಕಾರ್ಯಕ್ಕೆ ಸಹಕರಿಸುವ ವಿಶ್ವಾಸವಿದೆ’ ಎಂದೂ ಅವರು ಆಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>