ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಶಾಲೆಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಕಲಿಕೆಯಲ್ಲಿನ ಹಿನ್ನಡೆಯನ್ನು ನಿವಾರಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಯೋಜನೆಯನ್ನು ಇತರ ರಾಜ್ಯಗಳೂ ಅನುಸರಿಸುತ್ತಿವೆ ಎಂದು ತಿಳಿಸಿದರು.