ತುಮಕೂರು: ‘ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡುವುದು ಬಿಟ್ಟು ಗೋಡೆಗೆ ಕೇಸರಿ ಬಣ್ಣ ಬಳಿಸುತ್ತಿದ್ದಾರೆ. ಅವನೊಬ್ಬ ಅಯೋಗ್ಯ ಶಿಕ್ಷಣ ಮಂತ್ರಿ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದವರು ಸರಿ ಇಲ್ಲ ಎನ್ನುತ್ತಾರೆ. ಇವರು ಇನ್ನೆಂತಹ ಶಿಕ್ಷಣ ಸಚಿವರು ಎಂದು ತರಾಟೆಗೆ ತೆಗೆದುಕೊಂಡರು.