ಪರಿಷ್ಕೃತ ಪಠ್ಯಪುಸ್ತಕಗಳಲ್ಲಿನ ತಪ್ಪುಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿರುವ ತಿದ್ದುಪಡಿಗಳ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು ವಿಷವುಣಿಸಿ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿಹಾಕಿ, ಅಪರಾಧವೇ ನಡೆದಿಲ್ಲ ಎಂಬಂತೆ ಬಿಂಬಿಸಲು ಹೊರಟಿರುವುದು ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ’ ಎಂದಿದ್ದಾರೆ.