ಮೊಟ್ಟೆ ತಿನ್ನುವವರಿಂದ ಮಠಗಳು ಕಾಣಿಕೆ ಸ್ವೀಕರಿಸದಿರಲು ಎಸ್.ಶಿವರಾಮು ಆಗ್ರಹ

ಮೈಸೂರು: ‘ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಮಠಾಧೀಶರು, ಮೊಟ್ಟೆ ತಿನ್ನುವ ಭಕ್ತರಿಂದ ಕಾಣಿಕೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬಾರದು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಗ್ರಹಿಸಿದರು.
‘ಮೊಟ್ಟೆ ಸೇವಿಸುವವರು ಕಾಣಿಕೆ ನೀಡಬಾರದು ಎಂದು ಮಠಗಳಲ್ಲಿ ಮೊದಲು ಫಲಕ ಅಳವಡಿಸಬೇಕು. ಮೊಟ್ಟೆ ಸೇವಿಸುವವರು ಹಾಗೂ ಮಾರುವವರ ಕಾಣಿಕೆಗಳನ್ನು ಪಡೆಯುವ ಮಠಗಳು, ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವುದು ಸರಿಯಲ್ಲ. ಅಂಥ ಸ್ವಾಮೀಜಿಗಳು ಮಠಾಧೀಶರಾಗಲು ನಾಲಾಯಕ್’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
‘ಮೊಟ್ಟೆ ನೀಡುವುದನ್ನು ವಿರೋಧಿಸಿ ಕೆಲವು ಮಠಾಧೀಶರು ಸಮಾವೇಶ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಈ ರೀತಿ ರಾಜಕಾರಣ ಮಾಡುತ್ತಿರುವ ಮಠಾಧೀಶರು ಮೊದಲು ತಮ್ಮ ಕಾವಿ ಕಳಚಿ ನಂತರ ರಾಜಕಾರಣ ಮಾಡಲಿ’ ಎಂದು ಸವಾಲೆಸೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.