ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ನಿಗದಿಗೊಳಿಸಿ ಆಗಸ್ಟ್ 24 ರಂದು ಆದೇಶ ಹೊರಡಿಸಲಾಗಿತ್ತು. ಅದೇ ಮೀಸಲಾತಿ ಪ್ರಕಾರ ಮೈಸೂರು ಮತ್ತು ತುಮಕೂರು ಪಾಲಿಕೆಗಳ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಸಲಾಗಿತ್ತು. ಮೀಸಲಾತಿ ನಿಗದಿಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ಕೆಲವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ‘ಮೀಸಲಾತಿ ನಿಗದಿ ಪ್ರಕ್ರಿಯೆಯಲ್ಲಿನ ಲೋಪವಾಗಿರುವ ಕಾರಣದಿಂದ ಈ ಪ್ರಕ್ರಿಯೆಯನ್ನು ಪುನಃ ನಡೆಸಬೇಕು’ ಎಂದು ಹೈಕೋರ್ಟ್ ನಿರ್ದೇಶನ ನೀಡಿತ್ತು.