ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾನುವಾರ ಬೆಳಿಗ್ಗೆ 9.30ಕ್ಕೆ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ನಾಡದೇವಿ ಚಾಮುಂಡೇಶ್ವರಿ ದೇವಿ, ಶಿವಾಜಿ ಮಹಾರಾಜ ಹಾಗೂ ಆರಾಧ್ಯ ದೈವ ಪಾಂಡುರಂಗನ ರಥವು ಹೊರಡಲಿದೆ. ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಈ ಯಾತ್ರೆ ಕೊನೆಗೊಳ್ಳಲಿದ್ದು ಅಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.