ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಕ್ಷತ್ರಿಯ ಏಕತಾ ರಥ ಯಾತ್ರೆ

Last Updated 12 ಮಾರ್ಚ್ 2021, 20:19 IST
ಅಕ್ಷರ ಗಾತ್ರ

ಬೆಂಗಳೂರು: ‘ಕ್ಷತ್ರಿಯ ಜನಾಂಗದ ಎಲ್ಲ ಪಂಗಡಗಳನ್ನೂ ಒಗ್ಗೂಡಿಸುವ ಸಲುವಾಗಿ ಇದೇ 14ರಂದು ಕ್ಷತ್ರಿಯ ಏಕತಾ ರಥ ಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಜನ ಸಮೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಶೈಲೇಶ್‌ ನಾಜರೆ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಾನುವಾರ ಬೆಳಿಗ್ಗೆ 9.30ಕ್ಕೆ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ನಾಡದೇವಿ ಚಾಮುಂಡೇಶ್ವರಿ ದೇವಿ, ಶಿವಾಜಿ ಮಹಾರಾಜ ಹಾಗೂ ಆರಾಧ್ಯ ದೈವ ಪಾಂಡುರಂಗನ ರಥವು ಹೊರಡಲಿದೆ. ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಈ ಯಾತ್ರೆ ಕೊನೆಗೊಳ್ಳಲಿದ್ದು ಅಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT