<p><strong>ಬೆಂಗಳೂರು:</strong> ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಪೂರಕವಾಗಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಕುರಿತು ಸಮಾಜದ ಎಲ್ಲ ಹಂತಗಳಲ್ಲಿ ಚರ್ಚೆ ಅಗತ್ಯ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಚುನಾವಣಾ ವ್ಯವಸ್ಥೆಯಲ್ಲಿನ ಲೋಪದೋಷಗಳು ಪ್ರಜಾಪ್ರಭುತ್ವದ ಅಧಃಪತನಕ್ಕೆ ಎಡೆಮಾಡುವ ಅಪಾಯವಿದೆ. ಈಗಲೇ ಎಚ್ಚೆತ್ತುಕೊಂಡು ಚುನಾವಣಾ ವ್ಯವಸ್ಥೆಯನ್ನು ಸರಿದಾರಿಗೆ ತರುವ ಬಗ್ಗೆ ಚರ್ಚಿಸಿ, ಹೆಜ್ಜೆ ಇಡಬೇಕಾಗಿದೆ' ಎಂದರು.</p>.<p>ಚುನಾವಣೆಯಲ್ಲಿನ ದೋಷಗಳಿಂದ ಅನೇಕ ಸಮಸ್ಯೆಗಳು ಜಟಿಲವಾಗುತ್ತಿವೆ. ಈ ಕುರಿತು ಸಮಾಜದ ಗಣ್ಯರು ಮೌನಕ್ಕೆ ಶರಣಾಗಿದ್ದಾರೆ. ಕೇವಲ ರಾಜಕಾರಣಿಗಳನ್ನು ದೂರುವುದರಿಂದ ಸಮಸ್ಯೆಗೆ ಪರಿಹಾರ ದೊರೆಯದು. ಇಡೀ ಸಮಾಜವೇ ಒಟ್ಟಾಗಿ ಚಿಂತಿಸಿ, ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.</p>.<p>'ಚರ್ಚೆ ಸಮಾಜದ ಯಾವುದೇ ಮೂಲೆಯಲ್ಲಿ ಆರಂಭವಾದರೂ ಸ್ವಾಗತ. ವಿಧಾನಮಂಡಲದಲ್ಲೂ ಚರ್ಚೆ ಆರಂಭಿಸುವಂತೆ ಎಲ್ಲ ಶಾಸಕರಿಗೂ ಸಲಹೆ ನೀಡುವೆ. ಈ ಕುರಿತ ಚರ್ಚೆಗೆ ವೇದಿಕೆ ಕಲ್ಪಿಸಲು ನಾನು ಮುಕ್ತವಾಗಿದ್ದೇನೆ' ಎಂದು ಸ್ಪೀಕರ್ ಹೇಳಿದರು.</p>.<p>ಚುನಾವಣಾ ಆಯೋಗ ಕೂಡ ಯಾಂತ್ರಿಕವಾಗಿ ಚುನಾವಣೆ ನಡೆಸುವುದಕ್ಕೆ ಸೀಮಿತ ಆಗಬಾರದು. ಚುನಾವಣೆಗಳಲ್ಲಿ ಸುಧಾರಣೆ ತರುವ ಕುರಿತು ಆಯೋಗ ಕೂಡ ಪ್ರಕ್ರಿಯೆ ಆರಂಭಿಸಬೇಕು ಎಂದರು.</p>.<p>ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಪೂರಕವಾಗಿ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಕುರಿತು ಸಮಾಜದ ಎಲ್ಲ ಹಂತಗಳಲ್ಲಿ ಚರ್ಚೆ ಅಗತ್ಯ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಚುನಾವಣಾ ವ್ಯವಸ್ಥೆಯಲ್ಲಿನ ಲೋಪದೋಷಗಳು ಪ್ರಜಾಪ್ರಭುತ್ವದ ಅಧಃಪತನಕ್ಕೆ ಎಡೆಮಾಡುವ ಅಪಾಯವಿದೆ. ಈಗಲೇ ಎಚ್ಚೆತ್ತುಕೊಂಡು ಚುನಾವಣಾ ವ್ಯವಸ್ಥೆಯನ್ನು ಸರಿದಾರಿಗೆ ತರುವ ಬಗ್ಗೆ ಚರ್ಚಿಸಿ, ಹೆಜ್ಜೆ ಇಡಬೇಕಾಗಿದೆ' ಎಂದರು.</p>.<p>ಚುನಾವಣೆಯಲ್ಲಿನ ದೋಷಗಳಿಂದ ಅನೇಕ ಸಮಸ್ಯೆಗಳು ಜಟಿಲವಾಗುತ್ತಿವೆ. ಈ ಕುರಿತು ಸಮಾಜದ ಗಣ್ಯರು ಮೌನಕ್ಕೆ ಶರಣಾಗಿದ್ದಾರೆ. ಕೇವಲ ರಾಜಕಾರಣಿಗಳನ್ನು ದೂರುವುದರಿಂದ ಸಮಸ್ಯೆಗೆ ಪರಿಹಾರ ದೊರೆಯದು. ಇಡೀ ಸಮಾಜವೇ ಒಟ್ಟಾಗಿ ಚಿಂತಿಸಿ, ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.</p>.<p>'ಚರ್ಚೆ ಸಮಾಜದ ಯಾವುದೇ ಮೂಲೆಯಲ್ಲಿ ಆರಂಭವಾದರೂ ಸ್ವಾಗತ. ವಿಧಾನಮಂಡಲದಲ್ಲೂ ಚರ್ಚೆ ಆರಂಭಿಸುವಂತೆ ಎಲ್ಲ ಶಾಸಕರಿಗೂ ಸಲಹೆ ನೀಡುವೆ. ಈ ಕುರಿತ ಚರ್ಚೆಗೆ ವೇದಿಕೆ ಕಲ್ಪಿಸಲು ನಾನು ಮುಕ್ತವಾಗಿದ್ದೇನೆ' ಎಂದು ಸ್ಪೀಕರ್ ಹೇಳಿದರು.</p>.<p>ಚುನಾವಣಾ ಆಯೋಗ ಕೂಡ ಯಾಂತ್ರಿಕವಾಗಿ ಚುನಾವಣೆ ನಡೆಸುವುದಕ್ಕೆ ಸೀಮಿತ ಆಗಬಾರದು. ಚುನಾವಣೆಗಳಲ್ಲಿ ಸುಧಾರಣೆ ತರುವ ಕುರಿತು ಆಯೋಗ ಕೂಡ ಪ್ರಕ್ರಿಯೆ ಆರಂಭಿಸಬೇಕು ಎಂದರು.</p>.<p>ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>