<p><strong>ಬೆಂಗಳೂರು:</strong> ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ 35 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ 71ರಷ್ಟು ಮತದಾನ ಆಗಿದೆ.</p>.<p>ಮೂರು ವರ್ಷಗಳಿಂದ ಅಧ್ಯಕ್ಷರಿಲ್ಲದೆಯೇ ಆಡಳಿತಾಧಿಕಾರಿ ನೇತೃತ್ವದಲ್ಲಿ ಮುಂದುವರೆದಿದ್ದ ಸಂಘಕ್ಕೆ ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಚುನಾವಣೆ ನಡೆದಿದೆ. ರಾಜ್ಯದಾದ್ಯಂತ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ, ಸಂಜೆ 5ರವರೆಗೆ ನಡೆಯಿತು.</p>.<p>ರಾಜ್ಯದಾದ್ಯಂತ ಒಟ್ಟು 221 ಅಭ್ಯರ್ಥಿಗಳು ಕಣದಲ್ಲಿದ್ದು, 1,049 ಮತ ಕೇಂದ್ರಗಳಲ್ಲಿ ಮತದಾನ ನಡೆಯಿತು. ಸಂಘದಲ್ಲಿ ಒಟ್ಟು 5,20,721 ಲಕ್ಷ ಮತದಾರರಿದ್ದು, 3,67,971 ಸದಸ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.</p>.<p>ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯನ್ನು ಒಳಗೊಂಡ ಜಿಲ್ಲಾ ಕ್ಷೇತ್ರದಲ್ಲಿ ಶೇ 71, ಮೈಸೂರು–ಶೇ 70, ಮಂಡ್ಯ – ಶೇ 56, ಹಾಸನ –ಶೇ 83, ತುಮಕೂರು– ಶೇ 78 , ಚಿತ್ರದುರ್ಗ– ಶೇ 84, ಕೋಲಾರ ಮತ್ತು ಚಿಕ್ಕಬಳ್ಳಾಪುರ ಶೇ –74, ದಕ್ಷಿಣ ಕನ್ನಡ ಮತ್ತು ಉಡುಪಿ – ಶೇ 83, ಕೊಡಗು ಶೇ – 82, ಶಿವಮೊಗ್ಗ ಮತ್ತು ಉತ್ತರ ಕನ್ನಡ ಶೇ 84, ಚಿಕ್ಕಮಗಳೂರು ಶೇ 69ರಷ್ಟು ಮತದಾನ ಆಗಿದೆ. </p>.<p>ಕಾರ್ಯಕಾರಿ ಸಮಿತಿಯ ಸ್ಥಾನಗಳನ್ನು ಗೆಲ್ಲಲು ಸಮುದಾಯ ಪ್ರಮುಖರು ‘ಸಿಂಡಿಕೇಟ್’ ಮಾಡಿಕೊಂಡು ಕಣಕ್ಕಿಳಿದಿದ್ದು, ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಇದೇ 15ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ 35 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ 71ರಷ್ಟು ಮತದಾನ ಆಗಿದೆ.</p>.<p>ಮೂರು ವರ್ಷಗಳಿಂದ ಅಧ್ಯಕ್ಷರಿಲ್ಲದೆಯೇ ಆಡಳಿತಾಧಿಕಾರಿ ನೇತೃತ್ವದಲ್ಲಿ ಮುಂದುವರೆದಿದ್ದ ಸಂಘಕ್ಕೆ ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಚುನಾವಣೆ ನಡೆದಿದೆ. ರಾಜ್ಯದಾದ್ಯಂತ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ, ಸಂಜೆ 5ರವರೆಗೆ ನಡೆಯಿತು.</p>.<p>ರಾಜ್ಯದಾದ್ಯಂತ ಒಟ್ಟು 221 ಅಭ್ಯರ್ಥಿಗಳು ಕಣದಲ್ಲಿದ್ದು, 1,049 ಮತ ಕೇಂದ್ರಗಳಲ್ಲಿ ಮತದಾನ ನಡೆಯಿತು. ಸಂಘದಲ್ಲಿ ಒಟ್ಟು 5,20,721 ಲಕ್ಷ ಮತದಾರರಿದ್ದು, 3,67,971 ಸದಸ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.</p>.<p>ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯನ್ನು ಒಳಗೊಂಡ ಜಿಲ್ಲಾ ಕ್ಷೇತ್ರದಲ್ಲಿ ಶೇ 71, ಮೈಸೂರು–ಶೇ 70, ಮಂಡ್ಯ – ಶೇ 56, ಹಾಸನ –ಶೇ 83, ತುಮಕೂರು– ಶೇ 78 , ಚಿತ್ರದುರ್ಗ– ಶೇ 84, ಕೋಲಾರ ಮತ್ತು ಚಿಕ್ಕಬಳ್ಳಾಪುರ ಶೇ –74, ದಕ್ಷಿಣ ಕನ್ನಡ ಮತ್ತು ಉಡುಪಿ – ಶೇ 83, ಕೊಡಗು ಶೇ – 82, ಶಿವಮೊಗ್ಗ ಮತ್ತು ಉತ್ತರ ಕನ್ನಡ ಶೇ 84, ಚಿಕ್ಕಮಗಳೂರು ಶೇ 69ರಷ್ಟು ಮತದಾನ ಆಗಿದೆ. </p>.<p>ಕಾರ್ಯಕಾರಿ ಸಮಿತಿಯ ಸ್ಥಾನಗಳನ್ನು ಗೆಲ್ಲಲು ಸಮುದಾಯ ಪ್ರಮುಖರು ‘ಸಿಂಡಿಕೇಟ್’ ಮಾಡಿಕೊಂಡು ಕಣಕ್ಕಿಳಿದಿದ್ದು, ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಇದೇ 15ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>