<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚುವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಹೆಚ್ಚುವರಿ ವಿದ್ಯುತ್ನ್ನು ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>ರಾಜ್ಯದಲ್ಲಿನ ವಿದ್ಯುತ್ ಪೂರೈಕೆಯ ಸ್ಥಿತಿಗತಿ ಮತ್ತು ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆ ಕುರಿತಂತೆ ಅವರು ಬುಧವಾರ ಸಭೆ ನಡೆಸಿದರು.</p>.<p>‘ರಾಜ್ಯದಲ್ಲಿ ಒಟ್ಟು ವಿದ್ಯುತ್ನಲ್ಲಿ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ವೇಳೆ ತಲೆದೋರುವ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು’ ಎಂದೂ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯ 30,562.56 ಮೆಗಾ ವ್ಯಾಟ್ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ಸದ್ಯ ವಿದ್ಯುತ್ ಕೊರತೆ ಇಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಈ ಬಾರಿ ವಿದ್ಯುತ್ ಕೊರತೆ ಉಂಟಾಗದು’ ಎಂದು ಅಧಿಕಾರಿಗಳು<br />ತಿಳಿಸಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ಸೋರಿಕೆ ಪ್ರಮಾಣ ಕೇವಲ ಶೇ 3ರಷ್ಟಿದೆ. ಆ ಮೂಲಕ, ಸೋರಿಕೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದಾಗ, ‘ವಿತರಣಾ ಜಾಲದ ಸೋರಿಕೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಬೇಕು’ ಎಂದು ಮುಖ್ಯಮಂತ್ರಿ<br />ಸೂಚಿಸಿದರು.</p>.<p>‘ನೀರಾವರಿ ಪಂಪ್ ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಸಾಧ್ಯವಾಗುವಂತೆ ಸ್ಟೇಷನ್ಗಳು ಹಾಗೂ ಫೀಡರ್ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 2022ರ ಮಧ್ಯಭಾಗದಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ. 26 ಸ್ಟೇಷನ್ಗಳು ಹಾಗೂ 182 ಫೀಡರ್ಗಳ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ’ ಎಂದೂ ಅಧಿಕಾರಿಗಳು ತಿಳಿಸಿದರು.</p>.<p>ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಕೂಡಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚುವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಹೆಚ್ಚುವರಿ ವಿದ್ಯುತ್ನ್ನು ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>ರಾಜ್ಯದಲ್ಲಿನ ವಿದ್ಯುತ್ ಪೂರೈಕೆಯ ಸ್ಥಿತಿಗತಿ ಮತ್ತು ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆ ಕುರಿತಂತೆ ಅವರು ಬುಧವಾರ ಸಭೆ ನಡೆಸಿದರು.</p>.<p>‘ರಾಜ್ಯದಲ್ಲಿ ಒಟ್ಟು ವಿದ್ಯುತ್ನಲ್ಲಿ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ವೇಳೆ ತಲೆದೋರುವ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು’ ಎಂದೂ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯ 30,562.56 ಮೆಗಾ ವ್ಯಾಟ್ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ಸದ್ಯ ವಿದ್ಯುತ್ ಕೊರತೆ ಇಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಈ ಬಾರಿ ವಿದ್ಯುತ್ ಕೊರತೆ ಉಂಟಾಗದು’ ಎಂದು ಅಧಿಕಾರಿಗಳು<br />ತಿಳಿಸಿದರು.</p>.<p>‘ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ಸೋರಿಕೆ ಪ್ರಮಾಣ ಕೇವಲ ಶೇ 3ರಷ್ಟಿದೆ. ಆ ಮೂಲಕ, ಸೋರಿಕೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದಾಗ, ‘ವಿತರಣಾ ಜಾಲದ ಸೋರಿಕೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆಗೊಳಿಸಬೇಕು’ ಎಂದು ಮುಖ್ಯಮಂತ್ರಿ<br />ಸೂಚಿಸಿದರು.</p>.<p>‘ನೀರಾವರಿ ಪಂಪ್ ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಸಾಧ್ಯವಾಗುವಂತೆ ಸ್ಟೇಷನ್ಗಳು ಹಾಗೂ ಫೀಡರ್ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 2022ರ ಮಧ್ಯಭಾಗದಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ. 26 ಸ್ಟೇಷನ್ಗಳು ಹಾಗೂ 182 ಫೀಡರ್ಗಳ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ’ ಎಂದೂ ಅಧಿಕಾರಿಗಳು ತಿಳಿಸಿದರು.</p>.<p>ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಕೂಡಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>