ಈ ಸಂಘರ್ಷದಿಂದ ಮಾನವ ಪ್ರಾಣ ಹಾನಿ, ಶಾಶ್ವತ ಹಾಗೂ ಪಾರ್ಶ್ವ ಅಂಗವಿಕಲತೆ, ಬೆಳೆ ಹಾನಿ ಮತ್ತು ಆಸ್ತಿ ಹಾನಿ ಉಂಟಾಗಿ ಸಾರ್ವಜನಿಕರಿಗೆ, ಮುಖ್ಯವಾಗಿ ರೈತರಿಗೆ ಆರ್ಥಿಕವಾಗಿ ಅಪಾರ ನಷ್ಟ ಉಂಟಾಗುತ್ತಿದೆ. ಆನೆ- ಮಾನವ ಸಂಘರ್ಷ ತಡೆಯಲು ಈಗಾಗಲೇ ರಾಜ್ಯದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಪ್ರತಿ ಕಿ.ಮೀಗೆ ₹1 ಕೋಟಿ ವೆಚ್ಚವಾಗುವುದೆಂದು ಅಂದಾಜು ಮಾಡಲಾಗಿದೆ, ತಮಿಳುನಾಡಿನ ಹೊಸೂರಿನ ಅರಣ್ಯ ಪ್ರದೇಶದ ಗಡಿಯಲ್ಲಿ ‘ಎಲಿಫೆಂಟ್ ಪ್ರೂಫ್ ಸ್ಟೀಲ್ ವೈರ್ ರೋಪ್ ಫೆನ್ಸ್’ ಅಳವಡಿಸಿ ಮಾನವ-ಆನೆ ಸಂಘರ್ಷ ತಡೆಗಟ್ಟುವಲ್ಲಿ ಯಶಸ್ವಿಯಾಗಿರುವುದಾಗಿ ಹಾಗೂ ಈ ರೀತಿಯ ಬೇಲಿ ಅಳವಡಿಕೆಗೆ ಪ್ರತಿ ಕಿ.ಮೀಗೆ ಅಂದಾಜು ₹ 40 ಲಕ್ಷ ವೆಚ್ಚವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.