ನಾಗರಹೊಳೆ ಮುಖ್ಯ ಕಚೇರಿ ಸಮೀಪದ ದೊಡ್ಡಹಳ್ಳ ಬೀಟ್ಗೆ ಸೇರಿದ ಗದ್ದೆಹಾಡಿಯಲ್ಲಿ,ಇತರ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಗುರುರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್ ತಿಳಿಸಿದ್ದಾರೆ.