<p><strong>ಹುಣಸೂರು</strong>: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಗುರುರಾಜ್ (52) ಮೃತಪಟ್ಟಿದ್ದಾರೆ.</p>.<p>ನಾಗರಹೊಳೆ ಮುಖ್ಯ ಕಚೇರಿ ಸಮೀಪದ ದೊಡ್ಡಹಳ್ಳ ಬೀಟ್ಗೆ ಸೇರಿದ ಗದ್ದೆಹಾಡಿಯಲ್ಲಿ,ಇತರ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಗುರುರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್ ತಿಳಿಸಿದ್ದಾರೆ.</p>.<p>ಹುಣಸೂರಿನಲ್ಲಿ ನೆಲೆಸಿದ್ದ ಗುರುರಾಜ್, 1991ರಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕ್ಷೇಮಾಭಿವೃದ್ಧಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.</p>.<p>ನಾಗರಹೊಳೆ ಹುಲಿ ರಕ್ಷಿತಾರಣ್ಯದ ನಿರ್ದೇಶಕರಾಗಿದ್ದ ಮಣಿಕಂಠನ್ ಅವರು,2018ರಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಗುರುರಾಜ್ (52) ಮೃತಪಟ್ಟಿದ್ದಾರೆ.</p>.<p>ನಾಗರಹೊಳೆ ಮುಖ್ಯ ಕಚೇರಿ ಸಮೀಪದ ದೊಡ್ಡಹಳ್ಳ ಬೀಟ್ಗೆ ಸೇರಿದ ಗದ್ದೆಹಾಡಿಯಲ್ಲಿ,ಇತರ ಸಿಬ್ಬಂದಿಯೊಂದಿಗೆ ಗಸ್ತಿನಲ್ಲಿದ್ದಾಗ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಗುರುರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್ ತಿಳಿಸಿದ್ದಾರೆ.</p>.<p>ಹುಣಸೂರಿನಲ್ಲಿ ನೆಲೆಸಿದ್ದ ಗುರುರಾಜ್, 1991ರಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕ್ಷೇಮಾಭಿವೃದ್ಧಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.</p>.<p>ನಾಗರಹೊಳೆ ಹುಲಿ ರಕ್ಷಿತಾರಣ್ಯದ ನಿರ್ದೇಶಕರಾಗಿದ್ದ ಮಣಿಕಂಠನ್ ಅವರು,2018ರಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>