ಇವರು ಕೊಡಗಿನ ಮಾಜಿ ಮುಖ್ಯಮಂತ್ರಿ ಸಿ.ಎಂ.ಪೂಣಚ್ಚ ಅವರ ಮಗ. ಕೂರ್ಗ್ ವೈಲ್ಡ್ಲೈಫ್ ಸೊಸೈಟಿಯ ಮಾಜಿ ಅಧ್ಯಕ್ಷ. ಕೊಡಗಿನ ಪರಿಸರ ಉಳಿಯ ಬೇಕು. ಆನೆಗಳು ಸೇರಿದಂತೆ ವನ್ಯಜೀವಿಗಳ ಬದುಕಿಗೆ ತೊಂದರೆ ಆಗಬಾರದು ಎಂದು ನಿರಂತರವಾಗಿ ಹೋರಾಟ ಮಾಡುತ್ತಾ ಬರುತ್ತಿದ್ದಾರೆ. ಕಾಡಾನೆಗಳ ಬಗ್ಗೆ ಅಪಾರವಾದ ಪ್ರೀತಿ ಇಟ್ಟುಕೊಂಡಿದ್ದಾರೆ ಮುತ್ತಣ್ಣ. ಘಟನೆ ತಿಳಿದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.