ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಕಾಡಾನೆ ದಾಳಿ: ವೃದ್ಧೆ ಸಾವು

ಆಟೊ ಅಡ್ಡಗಟ್ಟಿ ದಾಳಿ, ಚಾಲಕನಿಗೆ ಗಾಯ
Last Updated 16 ಆಗಸ್ಟ್ 2020, 12:43 IST
ಅಕ್ಷರ ಗಾತ್ರ

ಸುಂಟಿಕೊಪ್ಪ (ಕೊಡಗು): ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾಡಾನೆ ದಾಳಿ ಪ್ರಕರಣಗಳು ನಡೆದಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಆಟೊ ಚಾಲಕ ಗಾಯಗೊಂಡಿದ್ದಾರೆ.

ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋದೂರು ಗ್ರಾಮದ ನೀನಾ (76) ಅವರು ಶನಿವಾರ ಸಂಜೆ ತಮ್ಮ ತೋಟದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ನೀನಾ ಅವರು ಕತ್ತಲಾದರೂ ಮನೆಗೆ ಬಾರದಿದ್ದಾಗ ಮನೆಯವರು ಹುಡುಕಾಟ ನಡೆಸಿದರು. ಆಗ ಆನೆ ದಾಳಿಯಿಂದ ಸಾವನ್ನಪ್ಪಿರುವುದು ಗೊತ್ತಾಗಿದೆ.

ಮಳೂರು ಗ್ರಾಮದ ನಿವಾಸಿ, ಆಟೊ ಚಾಲಕ ಬಾಬು ಅವರು ಸಮೀಪದ ಅಂದಗೋವೆ -ಕಲ್ಲೂರು ಸೇರುವ ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ಪ್ರಯಾಣಿಕರೊಂದಿಗೆ ಬರುತ್ತಿದ್ದ ವೇಳೆ ಕಾಡಾನೆಯೊಂದು ಆಟೊ ಅಡ್ಡಗಟ್ಟಿ ದಾಳಿ ನಡೆಸಿದೆ.

ಆಟೊ ಚಾಲಕ, ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT