ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ್ಜಲ ಮರುಪೂರಣಕ್ಕೆ ಒತ್ತು: ಈಶ್ವರಪ್ಪ

ರಾಷ್ಟ್ರೋತ್ಥಾನ ಗೋಶಾಲೆಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ
Last Updated 14 ಆಗಸ್ಟ್ 2021, 19:38 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಯೋಜನೆಯಂತೆ ಮಳೆ ನೀರನ್ನು ಭೂಮಿಯಲ್ಲಿ ಇಂಗಿಸುವ ಮೂಲಕ ಅಂತರ್ಜಲ ಮರುಪೂರಣ ಎಂಬ ಕಾರ್ಯಕ್ರಮದಡಿ ರಾಜ್ಯದ ಎಲ್ಲ ಕೆರೆಕಟ್ಟೆ, ಕಲ್ಯಾಣಿಗಳನ್ನು ನರೇಗಾ ಅಡಿಯಲ್ಲಿ ಅಂತರ್ಜಲ ಮರುಪೂರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ತಾಲ್ಲೂಕಿನ ಎಸ್.ಎಸ್. ಘಾಟಿಯಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆ ಮಾಧವ ಸೃಷ್ಟಿಗೆ ಶನಿವಾರ ಭೇಟಿ ನೀಡಿ ಗೋ ಮಾತೆಗೆ ಪೂಜೆ ಸಲ್ಲಿಸಿ, ಗಿಡ ನೆಟ್ಟರು.

ರಾಜ್ಯದ ಎಲ್ಲ ಕೆರೆ ಕಟ್ಟೆಗಳು, ಕಲ್ಯಾಣಿಗಳನ್ನು ನರೇಗಾ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು,
ಇಡೀ ದೇಶದಲ್ಲಿ ನರೇಗಾ ಕಾಮಗಾರಿ ಮುಖಾಂತರ ಕರ್ನಾಟಕ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ‌. ನರೇಗಾದಡಿ ದುಡಿಯುವುದಕ್ಕೆ ಕೂಲಿ ಎಂದು ಹೇಳುವುದಕ್ಕೆ ಇಷ್ಟ ಪಡುವುದಿಲ್ಲ. ಯುದ್ಧ ಭೂಮಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವ ರೀತಿಯಲ್ಲಿಯೇ ಸಮಾಜದಲ್ಲಿ ಬಡವರು ಕೂಡ ಸೈನಿಕರ ರೂಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಬಹುದು ಎಂದರು.

’ನಾವೆಲ್ಲರೂ ಪರಿಸರ ಬೆಳೆಸಲು, ಕೆರೆ ಮತ್ತು ಕಲ್ಯಾಣಿಗಳು ಅಭಿವೃದ್ಧಿ ಮಾಡಲು ಈ ಸ್ಥಳ ಸ್ಫೂರ್ತಿ ನೀಡುತ್ತದೆ. ಇಲ್ಲಿ ತರಬೇತಿ ಕೇಂದ್ರ ತೆರೆಯಬೇಕೆಂಬ ತೀರ್ಮಾನ ಕೈಗೊಂಡಿರುವುದಾಗಿ’ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT