ಇದನ್ನು ಮನ್ನಿಸಿದ ನ್ಯಾಯಪೀಠ, ‘ಒಂದಷ್ಟು ಮಾತ್ರವೇ ತೆರವುಗೊಳಿಸಿದರೆ ಸಾಲದು. ಒತ್ತುವರಿ ಪ್ರದೇಶದಲ್ಲಿ ಬೆಳೆದಿರುವ ಬೆಳೆಯನ್ನು ಕಟಾವು ಮಾಡಿದ ಕೂಡಲೇ ಒತ್ತುವರಿ ಸಂಪೂರ್ಣ ತೆರವುಗೊಳಿಸಬೇಕು. ಅಂತೆಯೇ, ರೈತರು ಮತ್ತೆ ಬೆಳೆ ಬೆಳೆಯದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು 2020ರ ಫೆಬ್ರುವರಿಗೆ ಮುಂದೂಡಿತು.