ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿ ಜಾರಿ ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯ: ಎಚ್.ಡಿ. ಕುಮಾರಸ್ವಾಮಿ

Last Updated 30 ಆಗಸ್ಟ್ 2020, 8:24 IST
ಅಕ್ಷರ ಗಾತ್ರ

ಬೆಂಗಳೂರು: ಒಳಮೀಸಲಾತಿ 'ಸರ್ವರಿಗೂ ಸಮಪಾಲು ಸಮಬಾಳು' ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ಧಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ ಎಂದಿದ್ದಾರೆ.

ಮೇಲ್ಜಾತಿಯಲ್ಲಿನ ಬಡವರಿಗೆ ಶೇ 10 ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ? ಸ್ವತಃ ಹಿಂದುಳಿದವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ
ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ
ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ
ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದೆಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ ಎಂಬ ವಚನವನ್ನು ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT