<p><strong>ಬೆಂಗಳೂರು:</strong> ಎಂಜಿನಿಯರಿಂಗ್ ವ್ಯಾಸಂಗಕ್ಕಾಗಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>‘ಈ ಸಂಬಂಧ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.</p>.<p>‘ನಗರ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಸೇರಲು ಬಂದಿದ್ದ ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಸ್ಥರಿಗೆ ಅದೇ ರಾಜ್ಯ<br />ದವನಾದ ಆರೋಪಿ ಪರಿಚಯವಾಗಿದ್ದ. ಎಂಜಿನಿಯರಿಂಗ್ ಪ್ರವೇಶ ಸಂಬಂಧ ಯುವಕನನ್ನು ಮಂಗಳವಾರ ಭೇಟಿಯಾಗಿ ಚರ್ಚಿಸಿದ್ದಳು. ಕಾಲೇಜಿಗೆ ಪ್ರವೇಶ ಶುಲ್ಕ ಪಾವತಿ ಮಾಡಲು ಬುಧವಾರ ತೆರಳಿದ್ದಾಗ, ಆಕೆಯ ಮೇಲೆ ಅತ್ಯಾಚಾರ ನಡೆದಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರಜ್ಞೆ ಕಳೆದುಕೊಂಡಿದ್ದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಯುವಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ, ಆಕೆ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಪ್ರಕರಣ ಸಂಬಂಧ ಯುವಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಂಜಿನಿಯರಿಂಗ್ ವ್ಯಾಸಂಗಕ್ಕಾಗಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>‘ಈ ಸಂಬಂಧ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.</p>.<p>‘ನಗರ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಸೇರಲು ಬಂದಿದ್ದ ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಸ್ಥರಿಗೆ ಅದೇ ರಾಜ್ಯ<br />ದವನಾದ ಆರೋಪಿ ಪರಿಚಯವಾಗಿದ್ದ. ಎಂಜಿನಿಯರಿಂಗ್ ಪ್ರವೇಶ ಸಂಬಂಧ ಯುವಕನನ್ನು ಮಂಗಳವಾರ ಭೇಟಿಯಾಗಿ ಚರ್ಚಿಸಿದ್ದಳು. ಕಾಲೇಜಿಗೆ ಪ್ರವೇಶ ಶುಲ್ಕ ಪಾವತಿ ಮಾಡಲು ಬುಧವಾರ ತೆರಳಿದ್ದಾಗ, ಆಕೆಯ ಮೇಲೆ ಅತ್ಯಾಚಾರ ನಡೆದಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರಜ್ಞೆ ಕಳೆದುಕೊಂಡಿದ್ದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಯುವಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ, ಆಕೆ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಪ್ರಕರಣ ಸಂಬಂಧ ಯುವಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>