‘ಪ್ರಧಾನಿ ಮಂತ್ರಿ ಕಚೇರಿ ಕಮಿಷನ್ ಆರೋಪವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದರಿಂದ ರಾಜ್ಯ ಬಿಜೆಪಿಯ ಭ್ರಷ್ಟಾಚಾರ ಬಯಲಾಗಲಿದೆ’ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಡಿ.ಕೆ ಸಹೋದರರಿಗೆ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ. ಅವರ ಕುಟುಂಬವೇ ಇ.ಡಿ ತನಿಖೆಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ಕೋತಿ ತಾನು ತಿಂದು ಬೇರೆಯವರ ಮುಖಕ್ಕೆ ಒರೆಸಿತು ಅಂತಾರಲ್ಲ ಹಾಗಾಗಿದೆ ಅವರ ಹೇಳಿಕೆ’ ಎಂದು ಛೇಡಿಸಿದರು.