ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆಪ್ತ ಕಾರ್ಯದರ್ಶಿಗಳು ಎಂದು ಹೇಳಿಕೊಂಡು ಇಬ್ಬರು ಉದ್ಯಮಿಗಳಿಗೆ ಒಟ್ಟು ₹ 36 ಲಕ್ಷ ವಂಚಿಸಿರುವ ಆರೋಪದ ಮೇಲೆ ಐವರ ವಿರುದ್ಧ ಇಲ್ಲಿನ ಸಿಇಎನ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮಂಗಳೂರಿನ ಮೊಹಮದ್ ರೆಹಮಾನ್, ಶಿವಮೊಗ್ಗದ ವಿಠಲ್ ರಾವ್, ಮಂಜುನಾಥ್, ಖಾಜಿವಲೀಸ್, ಹಾಸನ ಜಿಲ್ಲೆ ಅರಸಿಕೆರೆಯ ಮೊಹಮದ್ ಮುಫಾಸಿರ್ ವಂಚಿಸಿರುವ ಆರೋಪಿಗಳು.