ಸರೂರು ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ಶಿವಾಚಾರ್ಯ ಸ್ವಾಮೀಜಿ, ಮಕಣಾಪುರ ಅಮೋಘೇಸಿದ್ದೇಶ್ವರ ಗುರುಪೀಠದ ಸೋಮಲಿಂಗೇಶ್ವರ ಸ್ವಾಮೀಜಿ, ಅಥಣಿಯ ಅಮರೇಶ್ವರ ಸ್ವಾಮೀಜಿ, ತಮಕೂರಿನ ಬಿಂದುಶೇಖರ ಒಡೇಯರು, ಅರಿಕೇರಿ ಮಠದ ಅಪ್ಪು ಒಡೇಯರು, ಹುಲಜಂತಿಯ ಮಾಳಿಂಗರಾಯ ಸ್ವಾಮೀಜಿ ಅವರು ನಗರದಲ್ಲಿನ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಮಾತುಕತೆ ನಡೆಸಿದರು.