ಹುಬ್ಬಳ್ಳಿ: ಗ್ರಾಮಗಳಲ್ಲಿ ಕೆರೆ, ಕಲ್ಯಾಣಿ , ನಾಲಾ ಪುನಶ್ಚೇತನ, ಗೋಕಟ್ಟೆ ನಿರ್ಮಾಣ ಸೇರಿದಂತೆ ಸಾಂಪ್ರದಾಯಿಕ ಹಾಗೂ ಇತರೆ ಜಲಮೂಲಗಳ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕಾಗಿ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ಕಾಮಗಾರಿಗಳನ್ನು ಕೈಗೊಳ್ಳುವ ಯೋಜನೆ ರೂಪಿಸಿ,ಇದಕ್ಕಾಗಿ ₹4,310 ಕೋಟಿ ವಿನಿಯೋಗಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.