<p><strong>ಬೆಂಗಳೂರು:</strong> ‘ಜೋಕರ್ ಎಂದು ಈಶ್ವರಪ್ಪ ಹೆಸರು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್<br />ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವಾಚ್ಯ ಪದ ಬಳಸಿದ್ದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮಾತಿನ ಭರದಲ್ಲಿ ಅವಾಚ್ಯ ಶಬ್ದ ಬಳಸಿದ ಈಶ್ವರಪ್ಪ ತಕ್ಷಣ ಎಚ್ಚೆತ್ತುಕೊಂಡು, ‘ಕೋಪದಲ್ಲಿ ಈ ಮಾತು ಬಂತು. ಆ ಮಾತು ವಾಪಸ್ ಪಡೆಯುತ್ತೇನೆ. ದಯವಿಟ್ಟು ಅದನ್ನು ಮುಂದುವರೆಸುವುದು ಬೇಡ’ ಎಂದು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.</p>.<p class="Subhead"><strong>ಹರಿಪ್ರಸಾದ್ ಹೇಳಿದ್ದೇನು: </strong>‘ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಹೆಸರನ್ನು ಮೇರಾ ನಾಮ್ ಜೋಕರ್ ಎಂದು ಬದಲಾಯಿಸಿಕೊಳ್ಳಲಿ. ದ್ವೇಷದ ಭಾಷಣ ಮಾಡುವುದು ಅವರ ತಪ್ಪಲ್ಲ. ಅವರು ಕಲಿತ ನಾಗಪುರ ಯುನಿವರ್ಸಿಟಿ ಹೇಳಿಕೊಟ್ಟ ಪಾಠ’ ಎಂದು ಬಿ.ಕೆ. ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.</p>.<p>‘ಉಪ ಮುಖ್ಯಮಂತ್ರಿ ಆಗಬೇಕೆಂದು ಈಶ್ವರಪ್ಪ ಹಲವು ಕಾರ್ಯಾಚರಣೆ ನಡೆಸಿದ್ದರು. ಉಪ ಮುಖ್ಯಮಂತ್ರಿ ಆಗದೇ ಇರುವುದರಿಂದ ಅವರಿಗೆ ಹುಚ್ಚು ಹಿಡಿದಿದೆ. ಪ್ರಚೋದನಕಾರಿ ಭಾಷಣ ಮಾಡಿದ ಈಶ್ವರಪ್ಪ ವಿರುದ್ಧ ತಕ್ಷಣ ಪೊಲೀಸರು ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಬೇಕು. ಸಚಿವ ಸಂಪುಟದಿಂದ ಅವರನ್ನು ಉಚ್ಚಾಟಿಸಬೇಕು’ ಎಂದು ಆಗ್ರಹಿಸಿದರು.</p>.<p class="Subhead"><strong>ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ: </strong>‘ಈಶ್ವರಪ್ಪ ಅವರ ಅವಾಚ್ಯ ನುಡಿಗಳು ಬಿಜೆಪಿಯ ನೀಚ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವರ ಹೇಳಿಕೆಗೆ ಮುಖ್ಯಮಂತ್ರಿಯಿಂದ ಉತ್ತರ ಎದುರು ನೋಡುತ್ತಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಈಶ್ವರಪ್ಪ ಅವರ ನಾಲಿಗೆ ಅವರ ಆಚಾರ ತೋರಿಸುತ್ತದೆ. ಬಿಜೆಪಿ ನಾಯಕರ ತಂದೆ ತಾಯಂದಿರು ಇಂಥ ಸಂಸ್ಕೃತಿ ಕಲಿಸಿದ್ದಾರೆ. ಇಂಥ ಭಾಷೆ ಬಳಸುವವರನ್ನು ಪಕ್ಷದಿಂದ ಕಿತ್ತುಹಾಕಬೇಕು. ಬಿಜೆಪಿಗೆ ನಾಚಿಕೆಗೇಡಿನ ಸಂಗತಿ, ಬಿಜೆಪಿಗೇ ಒಂದು ಕಳಂಕ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜೋಕರ್ ಎಂದು ಈಶ್ವರಪ್ಪ ಹೆಸರು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್<br />ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವಾಚ್ಯ ಪದ ಬಳಸಿದ್ದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮಾತಿನ ಭರದಲ್ಲಿ ಅವಾಚ್ಯ ಶಬ್ದ ಬಳಸಿದ ಈಶ್ವರಪ್ಪ ತಕ್ಷಣ ಎಚ್ಚೆತ್ತುಕೊಂಡು, ‘ಕೋಪದಲ್ಲಿ ಈ ಮಾತು ಬಂತು. ಆ ಮಾತು ವಾಪಸ್ ಪಡೆಯುತ್ತೇನೆ. ದಯವಿಟ್ಟು ಅದನ್ನು ಮುಂದುವರೆಸುವುದು ಬೇಡ’ ಎಂದು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.</p>.<p class="Subhead"><strong>ಹರಿಪ್ರಸಾದ್ ಹೇಳಿದ್ದೇನು: </strong>‘ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಹೆಸರನ್ನು ಮೇರಾ ನಾಮ್ ಜೋಕರ್ ಎಂದು ಬದಲಾಯಿಸಿಕೊಳ್ಳಲಿ. ದ್ವೇಷದ ಭಾಷಣ ಮಾಡುವುದು ಅವರ ತಪ್ಪಲ್ಲ. ಅವರು ಕಲಿತ ನಾಗಪುರ ಯುನಿವರ್ಸಿಟಿ ಹೇಳಿಕೊಟ್ಟ ಪಾಠ’ ಎಂದು ಬಿ.ಕೆ. ಹರಿಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.</p>.<p>‘ಉಪ ಮುಖ್ಯಮಂತ್ರಿ ಆಗಬೇಕೆಂದು ಈಶ್ವರಪ್ಪ ಹಲವು ಕಾರ್ಯಾಚರಣೆ ನಡೆಸಿದ್ದರು. ಉಪ ಮುಖ್ಯಮಂತ್ರಿ ಆಗದೇ ಇರುವುದರಿಂದ ಅವರಿಗೆ ಹುಚ್ಚು ಹಿಡಿದಿದೆ. ಪ್ರಚೋದನಕಾರಿ ಭಾಷಣ ಮಾಡಿದ ಈಶ್ವರಪ್ಪ ವಿರುದ್ಧ ತಕ್ಷಣ ಪೊಲೀಸರು ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಬೇಕು. ಸಚಿವ ಸಂಪುಟದಿಂದ ಅವರನ್ನು ಉಚ್ಚಾಟಿಸಬೇಕು’ ಎಂದು ಆಗ್ರಹಿಸಿದರು.</p>.<p class="Subhead"><strong>ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ: </strong>‘ಈಶ್ವರಪ್ಪ ಅವರ ಅವಾಚ್ಯ ನುಡಿಗಳು ಬಿಜೆಪಿಯ ನೀಚ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವರ ಹೇಳಿಕೆಗೆ ಮುಖ್ಯಮಂತ್ರಿಯಿಂದ ಉತ್ತರ ಎದುರು ನೋಡುತ್ತಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಈಶ್ವರಪ್ಪ ಅವರ ನಾಲಿಗೆ ಅವರ ಆಚಾರ ತೋರಿಸುತ್ತದೆ. ಬಿಜೆಪಿ ನಾಯಕರ ತಂದೆ ತಾಯಂದಿರು ಇಂಥ ಸಂಸ್ಕೃತಿ ಕಲಿಸಿದ್ದಾರೆ. ಇಂಥ ಭಾಷೆ ಬಳಸುವವರನ್ನು ಪಕ್ಷದಿಂದ ಕಿತ್ತುಹಾಕಬೇಕು. ಬಿಜೆಪಿಗೆ ನಾಚಿಕೆಗೇಡಿನ ಸಂಗತಿ, ಬಿಜೆಪಿಗೇ ಒಂದು ಕಳಂಕ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>