ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಮಾ ಜಾರಿ ಚಿಂತನೆ: ಮುಖ್ಯಮಂತ್ರಿ

Last Updated 8 ಏಪ್ರಿಲ್ 2021, 3:52 IST
ಅಕ್ಷರ ಗಾತ್ರ

ಬೆಳಗಾವಿ: ‘ಪರಿಪರಿಯಾಗಿ ಮನವಿ ಮಾಡಿಕೊಂಡರೂ ಸಾರಿಗೆ ನೌಕರರು ಕೆಲಸದಿಂದ ದೂರ ಉಳಿದು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ (ಅಗತ್ಯ ಸೇವಾ ನಿರ್ವಹಣಾ ಕಾಯ್ದೆ) ಜಾರಿ ಬಗ್ಗೆ ಚಿಂತಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನೌಕರರು ಮುಷ್ಕರ ನಿಲ್ಲಿಸಿ, ಮಾತುಕತೆಗೆ ಬರಬೇಕು. ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧ. ಹಟ ಸರಿಯಲ್ಲ’ ಎಂದರು.

‘ನೌಕರರ ಒಂಬತ್ತು ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶ ಮತ್ತು ಸ್ವಾರ್ಥದಿಂದ ಹಟ ಮಾಡುವುದು ಸಲ್ಲದು. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ’ ಎಂದು ಹೇಳಿದರು.

‘ಮುಷ್ಕರದ ನೆಪದಲ್ಲಿ ಖಾಸಗಿಯವರು ಹೆಚ್ಚಿಗೆ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಲ್ಲೂ ಮನವಿ ಮಾಡುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT