‘2ಎ ಪ್ರವರ್ಗದಲ್ಲಿರುವ ಈಡಿಗ ಸಮುದಾಯವು 25 ಉಪ ಜಾತಿಗಳನ್ನು ಒಳಗೊಂಡಿದ್ದು, 50 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಇವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಕುಲ ಕಸುಬು ಆಧರಿಸಿದ ಜಾತಿಗಳಾಗಿವೆ. ಪ್ರವರ್ಗ 2ಎ ಮೀಸಲಾತಿ ಸೌಲಭ್ಯಕ್ಕೆ ಯಾವುದೇ ಧಕ್ಕೆಯಾಗಬಾರದು. ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ್ ವರದಿಯನ್ನು ಈ ಕೂಡಲೇ ಜಾರಿಗೊಳಿಸಬೇಕು. ಸರ್ಕಾರ ಸಿಗಂದೂರು ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಬಾರದು’ ಎಂದು ಆಗ್ರಹಿಸಿದರು.