‘ರಾಜ್ಯದ 32 ಸಕ್ಕರೆ ಕಾರ್ಖಾನೆ ಗಳಲ್ಲಿ ಎಥೆನಾಲ್ ಉತ್ಪಾದಿಸಲಾಗು ತ್ತಿದೆ. ಇನ್ನೂ 60 ಸಕ್ಕರೆ ಕಾರ್ಖಾನೆ ಗಳು ಅನುಮತಿ ಪಡೆಯುವ ಹಂತದಲ್ಲಿವೆ.ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಎಥೆನಾಲ್ ಉತ್ಪಾದನೆಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು. ಕೇವಲ ಕಬ್ಬಿನಿಂದ ಮಾತ್ರವಲ್ಲ, ಭತ್ತ, ಜೋಳ ಹಾಗೂ ಗೋಧಿಯ ಹೊಟ್ಟಿನಿಂದಲೂ ಎಥೆನಾಲ್ ತಯಾರಿಸಬಹುದಾಗಿದೆ. ಇದರಿಂದ, ಮುಂಬರುವ ದಿನಗಳಲ್ಲಿ ದೇಶದಲ್ಲೇ ಅತಿ ಹೆಚ್ಚು ಎಥೆನಾಲ್ ಕರ್ನಾಟಕದಲ್ಲಿ ಉತ್ಪಾದನೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.