ಕೋವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಗಾಗಿ ನಗರದಲ್ಲಿ ನಾಲ್ಕೈದು ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದೆ. ತಾವರೆಕೆರೆ ಬಳಿ ನಾಲ್ಕು ಎಕರೆ ಜಮೀನು ಗುರುತಿಸಿದ್ದು, ಅಲ್ಲಿ ಶವಗಳ ದಹನಕ್ಕೆ ಆದೇಶ ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಅನಿವಾರ್ಯವಾದರೆ ಶವಗಳ ದಹನಕ್ಕೆ ಜಾಗ ಗುರುತಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಗ್ರಾಮಾಂತರ ಪ್ರದೇಶದಿಂದ ಶವಗಳು ಬರುತ್ತಿರುವ ಕಾರಣ ವಿದ್ಯುತ್ ಚಿತಾಗಾರಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಅಶೋಕ ಹೇಳಿದರು.