ಹಾಡಿನ ರೂಪದಲ್ಲಿ ಬರಲಿದೆ ಸಿದ್ದರಾಮಯ್ಯ ಜೀವನ ಚರಿತ್ರೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯು ಹಾಡಿನ ರೂಪದಲ್ಲಿ ಹೊರಬರಲಿದೆ. 'ಸಿದ್ದು ಜೀವನ ಗಾನ' ತಯಾರಿಸಲು ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.
ಈ ವಿಡಿಯೊ ಸಾಂಗ್ ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ತಯಾರಾಗಲಿದ್ದು, ಹೈದರಾಬಾದ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ತೆಲುಗು ಚಿತ್ರರಂಗದ ಖ್ಯಾತ ಗಾಯಕರಿಂದ ಹಾಡಿಗೆ ಧ್ವನಿಯಾಗಲಿದ್ದಾರೆ.
ಹೈದಾರಾಬಾದ್ನಲ್ಲಿರುವ ಉದ್ಯಮಿ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿ ಶ್ರೀಧರ್ ಅವರು ನಿರ್ಮಾಣದ ಹೊಣೆ ಹೊತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.