ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯು ಹಾಡಿನ ರೂಪದಲ್ಲಿ ಹೊರಬರಲಿದೆ. 'ಸಿದ್ದು ಜೀವನ ಗಾನ' ತಯಾರಿಸಲು ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.
ಈ ವಿಡಿಯೊ ಸಾಂಗ್ ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ತಯಾರಾಗಲಿದ್ದು, ಹೈದರಾಬಾದ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ತೆಲುಗು ಚಿತ್ರರಂಗದ ಖ್ಯಾತ ಗಾಯಕರಿಂದ ಹಾಡಿಗೆ ಧ್ವನಿಯಾಗಲಿದ್ದಾರೆ.
ಹೈದಾರಾಬಾದ್ನಲ್ಲಿರುವ ಉದ್ಯಮಿ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿ ಶ್ರೀಧರ್ ಅವರು ನಿರ್ಮಾಣದ ಹೊಣೆ ಹೊತ್ತಿದ್ದಾರೆ.