ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ ಕುಮಾರ್‌ ಹೇಳಿಕೆ ಕಾಂಗ್ರೆಸ್‌ ಹಗಲು ದರೋಡೆಗೆ ಸಾಕ್ಷಿ: ಯಡಿಯೂರಪ್ಪ

Last Updated 13 ಅಕ್ಟೋಬರ್ 2022, 11:16 IST
ಅಕ್ಷರ ಗಾತ್ರ

ಹೂವಿನಹಡಗಲಿ/ಹೊಸಪೇಟೆ (ವಿಜಯನಗರ): ‘ಗಾಂಧಿ ಕುಟುಂಬದವರು ಮೂರು, ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ರಮೇಶ ಕುಮಾರ್ ಹೇಳಿರುವುದು ಕಾಂಗ್ರೆಸ್‌ ಹಗಲು ದರೋಡೆಗೆ ಸಾಕ್ಷಿ’ ಎಂದು ಮಾಜಿ ಮುಖ್ಯಮಂತ್ರಿಯೂ ಆದ ಶಾಸಕ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು.

ಇಲ್ಲಿನ ಜಿ.ಬಿ.ಆರ್‌. ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಮೇಶ ಕುಮಾರ್‌ ಅವರ ಹೇಳಿಕೆಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಲ್ಲಗಳೆದಿಲ್ಲ. ಇದು ಹಗಲು ದರೋಡೆಗೆ ಸಾಕ್ಷಿ. ಇಂಥ ಜನರನ್ನು ರಾಜ್ಯದಲ್ಲಿ ಲೂಟಿಗೆ ಅವಕಾಶ ಮಾಡಿಕೊಡಬಾರದು ಎಂದು ಹೇಳಿದರು.

ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಬಿಜೆಪಿ ಹಗರಣಗಳ ಬಗ್ಗೆ ಮಾತಾಡುತ್ತಿದ್ದಾರೆ. ಯುಪಿಎ ಅವಧಿಯಲ್ಲಿ ಕಲ್ಲಿದ್ದಲ್ಲು, ಕಾಮನ್‌ವೆಲ್ತ್‌, 2ಜಿ ಹಗರಣ ನಡೆದಿತ್ತು. ರಾಬರ್ಟ್‌ ವಾದ್ರಾ ಅವರ ಹೆಸರು ಹಗರಣದಲ್ಲಿ ಕೇಳಿ ಬಂದಿದೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ, ರಾಹುಲ್‌ ಹೆಸರಿದೆ. ಈಗ ಅವರು ಹಗರಣಗಳ ಬಗ್ಗೆ ಮಾತಾಡುತ್ತಿರುವುದು ಎಷ್ಟರಮಟ್ಟಿಗೆ ಸೂಕ್ತವೆಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಪುನಃ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎನ್ನುವುದು ತಿರುಕನ ಕನಸು. ದೇಶದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಉಳಿದ ಕಡೆ ಅಡ್ರೆಸ್‌ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಅಡ್ರೆಸ್‌ ಹುಡುಕಲು ‘ಭಾರತ್‌ ಜೋಡೋ’ ಯಾತ್ರೆ ನಡೆಸುತ್ತಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT