ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಬಿಜೆಪಿ ಹಗರಣಗಳ ಬಗ್ಗೆ ಮಾತಾಡುತ್ತಿದ್ದಾರೆ. ಯುಪಿಎ ಅವಧಿಯಲ್ಲಿ ಕಲ್ಲಿದ್ದಲ್ಲು, ಕಾಮನ್ವೆಲ್ತ್, 2ಜಿ ಹಗರಣ ನಡೆದಿತ್ತು. ರಾಬರ್ಟ್ ವಾದ್ರಾ ಅವರ ಹೆಸರು ಹಗರಣದಲ್ಲಿ ಕೇಳಿ ಬಂದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಹೆಸರಿದೆ. ಈಗ ಅವರು ಹಗರಣಗಳ ಬಗ್ಗೆ ಮಾತಾಡುತ್ತಿರುವುದು ಎಷ್ಟರಮಟ್ಟಿಗೆ ಸೂಕ್ತವೆಂದು ಪ್ರಶ್ನಿಸಿದರು.