<p><strong>ಬೆಂಗಳೂರು:</strong> ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದೆ.</p>.<p>ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.</p>.<p>ಸ್ಪೀಕರ್ ಕಾಗೇರಿ ನೇತೃತ್ವದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.</p>.<p>‘ಪ್ರಶಸ್ತಿಗೆ ನಾವು ಹಲವು ಹೆಸರನ್ನು ಪರಿಶೀಲಿಸಿದೆವು.ಅದರೆ, ಆಯ್ಕೆ ಕ್ಲಿಷ್ಟಕರವಾಗಿತ್ತು. ಯಡಿಯೂರಪ್ಪನವರ ಆಯ್ಕೆಯು ಸರ್ವಾನುಮತದಿಂದ ಕೂಡಿದೆ,’ ಎಂದು ಕಾಗೇರಿ ಹೇಳಿದರು.</p>.<p>‘ಅತ್ಯುತ್ತಮ ಶಾಸಕ ಪ್ರಶಸ್ತಿ’ಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ಕಾಗೇರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದೆ.</p>.<p>ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.</p>.<p>ಸ್ಪೀಕರ್ ಕಾಗೇರಿ ನೇತೃತ್ವದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.</p>.<p>‘ಪ್ರಶಸ್ತಿಗೆ ನಾವು ಹಲವು ಹೆಸರನ್ನು ಪರಿಶೀಲಿಸಿದೆವು.ಅದರೆ, ಆಯ್ಕೆ ಕ್ಲಿಷ್ಟಕರವಾಗಿತ್ತು. ಯಡಿಯೂರಪ್ಪನವರ ಆಯ್ಕೆಯು ಸರ್ವಾನುಮತದಿಂದ ಕೂಡಿದೆ,’ ಎಂದು ಕಾಗೇರಿ ಹೇಳಿದರು.</p>.<p>‘ಅತ್ಯುತ್ತಮ ಶಾಸಕ ಪ್ರಶಸ್ತಿ’ಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ಕಾಗೇರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>