ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಮದುವೆ ಸಮಾರಂಭದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ನಡೆಸಿದ್ದ ಪೊಲೀಸರು ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದರು. ವಿಚಿತ್ರ ಎಂದರೆ, ಹಲ್ಲೆಗೊಳಗಾದ ಕೊರಗರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ನಿಜವಾಗಿದ್ದಲ್ಲಿ ಅಂದೇ ಏಕೆ ಪ್ರಕರಣ ದಾಖಲಿಸಲಿಲ್ಲ. ವಿಷಯ ಗಂಭೀರ ತಿರುವು ಪಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿರುವುದನ್ನು ನೋಡಿದರೆ ಪೊಲೀಸರು ಹೇಳುತ್ತಿರುವುದು ಸುಳ್ಳೆಂದು ತೋರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.