ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಟ್ಟೂರು ಹೆಗ್ಗವಾಡಿಯಲ್ಲಿ ನಾಳೆ ಧ್ರುವನಾರಾಯಣ ಅಂತ್ಯಕ್ರಿಯೆ

Last Updated 11 ಮಾರ್ಚ್ 2023, 7:02 IST
ಅಕ್ಷರ ಗಾತ್ರ

ಚಾಮರಾಜನಗರ: ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ತಾಲ್ಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ.

ಮೈಸೂರಿನ ಅವರ ಮನೆ, ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು.

ನಂಜನಗೂಡಿಂದ ಮೃತದೇಹವನ್ನು ಚಾಮರಾಜನಗರಕ್ಕೂ‌ ತರಲಾಗುವುದು. ಆ ಬಳಿಕ ಅಲ್ಲಿಂದ ಹುಟ್ಟೂರು ಹೆಗ್ಗವಾಡಿಗೆ ತೆಗೆದುಕೊಂಡು ಹೋಗಲಾಗುವುದು.

ಹೆಗ್ಗವಾಡಿಯಲ್ಲಿರುವ ಅವರ ಜಮೀನಿನಲ್ಲಿ, ತಂದೆ ತಾಯಿ ಸಮಾಧಿ ಪಕ್ಕದಲ್ಲಿ, ಅಂತ್ಯಸಂಸ್ಕಾರ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.

ಎಸ್ ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಪದ್ಮಿನಿ ಸಾಹು ಹಾಗೂ ಅಧಿಕಾರಿಗಳು ಹೆಗ್ಗವಾಡಿಗೆ ಭೇಟಿ ನೀಡಿ ಅಂತ್ಯಕ್ರಿಯೆ ಸ್ಥಳ ಪರಿಶೀಲಿಸಿದರು. ಅಂತಿಮ ದರ್ಶನಕ್ಕೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಗ್ರಾಮಸ್ಥರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT