ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ 18 ರಿಂದ 44 ವಯೋಮಾನದವರಿಗೆ ಹಮ್ಮಿಕೊಂಡಿರುವ ಮೂರು ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ಲಾಕ್ ಡೌನ್ ವಿಧಿಸಿದ ಬಳಿಕ ಏಪ್ರಿಲ್ 1ರಿಂದ ಜೂನ್ 15 ರ ಅವಧಿಯಲ್ಲಿ ಅಬಕಾರಿ ಇಲಾಖೆಗೆ ₹ 4,500 ಕೋಟಿ ವರಮಾನ ಬಂದಿದೆ. ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಹೆಚ್ಚು ಲಾಭ ಬಂದಂತಾಗಿದೆ ಎಂದರು.