‘ಅನಧಿಕೃತವಾಗಿ ಜಿಲೆಟಿನ್ ಸಂಗ್ರಹ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿವಮೊಗ್ಗ ಬಳಿ ಡೈನಮೈಟ್ ಸ್ಫೋಟ ಪ್ರಕರಣದ ಬಗ್ಗೆ ಫೊರೆನ್ಸಿಕ್ ತಂಡ, ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಅವುಗಳ ವರದಿ ಆಧಾರದಲ್ಲಿ ಮುಂದಿನ ತನಿಖೆ ಕೈಗೊಳ್ಳಲಾಗುವುದು’ ಎಂದೂ ಬೊಮ್ಮಾಯಿ ವಿವರಿಸಿದರು.