ಈ ಕುರಿತು ಟ್ವಿಟರ್ನಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಅವರು, ‘ಮಂಗಳೂರಿನಲ್ಲಿ ನಡೆದಿರುವ ಸ್ಫೋಟವು ಭಯೋತ್ಪಾದಕರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ದೃಢಪಡಿಸಿದ್ದಾರೆ. ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಘಟನೆ ಕುರಿತು ಪೊಲಿಸರು ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ, ಶಿಕ್ಷೆಗೊಳಪಡಿಡಬೇಕು’ ಎಂದು ಆಗ್ರಹಿಸಿದ್ದಾರೆ.