ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಸುಗೂರಿನ ಮಾಜಿ ಶಾಸಕ ಮಾನಪ್ಪ ವಜ್ಜಲ್ ಸಹೋದರ ಎನ್.ಡಿ. ವಡ್ಡರ್ ಎಂಬ ಗುತ್ತಿಗೆದಾರನಿಗೆ ನಕಲಿ ಬಿಲ್ ಸೃಷ್ಟಿಸಿ ₹ 435 ಕೋಟಿ ಪಾವತಿ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಶಾಸಕ ಹೂಲಿಗೇರಿ ಅವರು ಜಲ ಸಂಪನ್ಮೂಲ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆ ಬಳಿಕ ತನಿಖೆ ನಡೆಸಿದ್ದ ತಾಂತ್ರಿಕ ಸಮಿತಿ, ಅಕ್ರಮ ನಡೆದಿರುವ ಅನುಮಾನ ವ್ಯಕ್ತಪಡಿಸಿದೆ’ ಎಂದರು.