<p><strong>ದಾವಣಗೆರೆ</strong>: ‘ನಮ್ಮ ಕುಟುಂಬ ಪಡೆದ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಹೈಕೋರ್ಟ್ ಸಿಂಧುಗೊಳಿಸಿದ್ದರೂ ವಿಧಾನಸಭೆಯಲ್ಲಿ ತಪ್ಪು ಮಾಹಿತಿ ನೀಡಿ ಶಾಸಕರು ಆರೋಪ ಮಾಡಿದ್ದಾರೆ’ ಎಂದು ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆಯ ಅಧ್ಯಕ್ಷ ಎಂ.ಪಿ.ದಾರಕೇಶ್ವರಯ್ಯ ಆರೋಪಿಸಿದ್ದಾರೆ.</p>.<p>‘ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಶಾಸಕರಾದ ಪಿ.ರಾಜೀವ್, ಗೂಳಿಹಟ್ಟಿ ಶೇಖರ್, ಪ್ರಿಯಾಂಕ್ ಖರ್ಗೆ, ಎನ್.ಮಹೇಶ್ ಅವರ ಶಾಸಕತ್ವವನ್ನು ರದ್ದುಗೊಳಿಸಬೇಕು’ ಎಂದು ಶಾಸಕ ರೇಣುಕಾಚಾರ್ಯ ಅವರ ಅಣ್ಣನೂ ಆಗಿರುವ ದಾರಕೇಶ್ವರಯ್ಯ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕಲಬುರಗಿ ಲೋಕಸಭಾ ಹಾಗೂ ಕನಕಗಿರಿ ವಿಧಾನಸಭಾ ಮೀಸಲು ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸಿದ್ದಾಗ ನಾಮಪತ್ರವನ್ನು ತಿರಸ್ಕರಿಸಿರಲಿಲ್ಲ. ಬೇಡ ಜಂಗಮ ಪ್ರಮಾಣಪತ್ರವನ್ನು ನಮಗೆ ನೀಡುವಂತೆ ಹೈಕೋರ್ಟ್ ಕೂಡ ಆದೇಶ ನೀಡಿದೆ. ಹೀಗಿದ್ದರೂ ಕೆಲವರು ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಬೇಡ ಜಂಗಮ ಪ್ರಮಾಣಪತ್ರ ಪಡೆದಿರುವ ಧಾರವಾಡದ ವಕೀಲ ವೀರಣ್ಣ ಹಿರೇಮಠ ಅವರ ಪುತ್ರಿ ಚೇತನಾ ಹಿರೇಮಠ ಅವರಿಗೆ ₹ 45 ಲಕ್ಷ ಸಾಲ ಸೌಲಭ್ಯ ಪ್ರಮಾಣಪತ್ರವನ್ನು ಸಿದ್ದರಾಮಯ್ಯ ಅವರೇ ನೀಡಿರುವ ಬಗ್ಗೆ ದಾಖಲೆ ಇದೆ’ ಎಂದು ಹೇಳಿದ್ದಾರೆ.</p>.<p>‘ನನ್ನ ಸಹೋದರನ ಪುತ್ರಿ ಚೇತನಾಗೆ ಬೇಡ ಜಂಗಮ ಪ್ರಮಾಣಪತ್ರವನ್ನು ನಾನು ಕೊಡಿಸಿದ್ದರೂ ಯಾವುದೇ ಸರ್ಕಾರಿ ಸೌಲಭ್ಯ ಪಡೆದುಕೊಂಡಿಲ್ಲ. ಚುನಾವಣೆಗೆ ಸ್ಪರ್ಧಿಸಲು ಮಾತ್ರ ಈ ಪ್ರಮಾಣಪತ್ರವನ್ನು ಬಳಸಿಕೊಂಡಿದ್ದೇನೆ’ ಎಂದು ಸಮರ್ಥಿಸಿಕೊಂಡರು.</p>.<p><strong>ದಾರಕೇಶ್ವರಯ್ಯಗೆ ಮುತ್ತಿಗೆ, ಪ್ರತಿಭಟನೆ</strong></p>.<p>ದಾವಣಗೆರೆ: ಎಂ.ಪಿ.ದಾರಕೇಶ್ವರಯ್ಯ ಅವರು ‘ಬೇಡ ಜಂಗಮ’ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದನ್ನು ಖಂಡಿಸಿ ಸಮುದಾಯದ ಮುಖಂಡರು ಸೋಮವಾರ ಮುತ್ತಿಗೆ, ಹಾಕಿ ಪ್ರತಿಭಟಿಸಿದರು.</p>.<p>ವಾಗ್ವಾದ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಪ್ರತಿಭಟನಕಾರರಿಂದ ದಾರಕೇಶ್ವರಯ್ಯ ಅವರನ್ನು ರಕ್ಷಿಸಿ ವಾಹನದಲ್ಲಿ ಕರೆದುಕೊಂಡು ಹೋದರು. ‘ಬೇಡ ಜಂಗಮ’ ಪ್ರಮಾಣಪತ್ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಹೊರಕ್ಕೆ ಬರುತ್ತಿದ್ದಂತೆ ಪರಿಶಿಷ್ಟ ಕಾರ್ಯಕರ್ತರು ಸುತ್ತುವರಿದು ಘೋಷಣೆಗಳನ್ನು ಕೂಗಿದರು.</p>.<p>ಆಗ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ವಾಹನ ತಡೆದ ಪ್ರತಿಭಟನಕಾರರು, ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ‘ದಲಿತರ ಹಕ್ಕನ್ನು ಕಿತ್ತುಕೊಂಡಿರುವ ರೇಣುಕಾಚಾರ್ಯ ಹಾಗೂ ದಾರಕೇಶ್ವರಯ್ಯ ಅವರನ್ನು ಬಂಧಿಸಬೇಕು’ ಎಂದು ಘೋಷಣೆ ಕೂಗಿದರು.</p>.<p>ಬಳಿಕ ಪೊಲೀಸರು ದಾರಕೇಶ್ವರಯ್ಯ ಅವರನ್ನು ಇನ್ನೊಂದು ವಾಹನದಲ್ಲಿ ಕರೆದುಕೊಂಡು ಹೋದರು. ಅರ್ಧ ಗಂಟೆಗೂ ಹೆಚ್ಚು ಹೊತ್ತು ದಾರಕೇಶ್ವರಯ್ಯ ಅವರು ಪೊಲೀಸ್ ವಾಹನದಲ್ಲೇ ದಿಗ್ಬಂಧನಕ್ಕೆ ಒಳಗಾಗಿದ್ದರು.</p>.<p>ಪರಿಶಿಷ್ಟ ಮುಖಂಡರಾದ ಹೂವಿನಮಡು ಅಂಜಿನಪ್ಪ, ಕಬ್ಬಳ್ಳಿ ಮೈಲಪ್ಪ, ಹೆಗ್ಗೆರೆ ರಂಗಪ್ಪ, ಡಿ. ಹನುಮಂತಪ್ಪ, ಆಟೊ ತಿಮ್ಮಣ್ಣ, ನೇರ್ಲಗಿ ರಾಜೇಶ್, ಬಾಡಾ ಶ್ರೀನಿವಾಸ್ ಪ್ರತಿಭಟನೆಯಲ್ಲಿದ್ದರು.</p>.<p><br /><strong>‘ಹಿಂದೂ ಲಿಂಗಾಯತ’ದಿಂದ ಬೇಡ ಜಂಗಮ’ ಹೇಗಾಯಿತು?</strong></p>.<p>ಹೊನ್ನಾಳಿ: ‘1966-67ರಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳಲ್ಲಿ ಜಾತಿ ‘ಹಿಂದೂ ಲಿಂಗಾಯತ’ ಎಂದಿದೆ. 2013-14ರಲ್ಲಿ ‘ಬೇಡ ಜಂಗಮ’ (ಎಸ್ಸಿ) ಆಗಿ ಬದಲಾಗಿದೆ. ಯಾರು, ಏಕೆ ಈ ಬದಲಾವಣೆ ಮಾಡಿದರು’ ಎಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಎಸ್ಸಿ, ಎಸ್ಟಿ ಪಂಗಡಗಳ ಮೀಸಲಾತಿ ಸಂರಕ್ಷಣಾ ಮಹಾ ಒಕ್ಕೂಟ ಪ್ರಶ್ನಿಸಿದೆ.</p>.<p>ಒಕ್ಕೂಟದ ಮುಖಂಡ ಕೊಡತಾಳ್ ರುದ್ರೇಶ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ, ಇದಕ್ಕೆ ಪೂರಕವಾಗಿ ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳ ಪ್ರತಿಗಳನ್ನು ಮಾಧ್ಯಮದವರಿಗೆ ಅವರು ತೋರಿಸಿದರು.</p>.<p>‘ಶಾಲಾ ದಾಖಲಾತಿಯಲ್ಲಿ ಬೇಡ ಜಂಗಮ (ಎಸ್ಸಿ) ಎಂದು ಬರೆಸಿದ್ದರೂ ನನಗೇನೂ ಗೊತ್ತಿಲ್ಲ ಎಂದು ಹೇಳುವ ರೇಣುಕಾಚಾರ್ಯ ಅವರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ನಮ್ಮ ಕುಟುಂಬ ಪಡೆದ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಹೈಕೋರ್ಟ್ ಸಿಂಧುಗೊಳಿಸಿದ್ದರೂ ವಿಧಾನಸಭೆಯಲ್ಲಿ ತಪ್ಪು ಮಾಹಿತಿ ನೀಡಿ ಶಾಸಕರು ಆರೋಪ ಮಾಡಿದ್ದಾರೆ’ ಎಂದು ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆಯ ಅಧ್ಯಕ್ಷ ಎಂ.ಪಿ.ದಾರಕೇಶ್ವರಯ್ಯ ಆರೋಪಿಸಿದ್ದಾರೆ.</p>.<p>‘ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಶಾಸಕರಾದ ಪಿ.ರಾಜೀವ್, ಗೂಳಿಹಟ್ಟಿ ಶೇಖರ್, ಪ್ರಿಯಾಂಕ್ ಖರ್ಗೆ, ಎನ್.ಮಹೇಶ್ ಅವರ ಶಾಸಕತ್ವವನ್ನು ರದ್ದುಗೊಳಿಸಬೇಕು’ ಎಂದು ಶಾಸಕ ರೇಣುಕಾಚಾರ್ಯ ಅವರ ಅಣ್ಣನೂ ಆಗಿರುವ ದಾರಕೇಶ್ವರಯ್ಯ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕಲಬುರಗಿ ಲೋಕಸಭಾ ಹಾಗೂ ಕನಕಗಿರಿ ವಿಧಾನಸಭಾ ಮೀಸಲು ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸಿದ್ದಾಗ ನಾಮಪತ್ರವನ್ನು ತಿರಸ್ಕರಿಸಿರಲಿಲ್ಲ. ಬೇಡ ಜಂಗಮ ಪ್ರಮಾಣಪತ್ರವನ್ನು ನಮಗೆ ನೀಡುವಂತೆ ಹೈಕೋರ್ಟ್ ಕೂಡ ಆದೇಶ ನೀಡಿದೆ. ಹೀಗಿದ್ದರೂ ಕೆಲವರು ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಬೇಡ ಜಂಗಮ ಪ್ರಮಾಣಪತ್ರ ಪಡೆದಿರುವ ಧಾರವಾಡದ ವಕೀಲ ವೀರಣ್ಣ ಹಿರೇಮಠ ಅವರ ಪುತ್ರಿ ಚೇತನಾ ಹಿರೇಮಠ ಅವರಿಗೆ ₹ 45 ಲಕ್ಷ ಸಾಲ ಸೌಲಭ್ಯ ಪ್ರಮಾಣಪತ್ರವನ್ನು ಸಿದ್ದರಾಮಯ್ಯ ಅವರೇ ನೀಡಿರುವ ಬಗ್ಗೆ ದಾಖಲೆ ಇದೆ’ ಎಂದು ಹೇಳಿದ್ದಾರೆ.</p>.<p>‘ನನ್ನ ಸಹೋದರನ ಪುತ್ರಿ ಚೇತನಾಗೆ ಬೇಡ ಜಂಗಮ ಪ್ರಮಾಣಪತ್ರವನ್ನು ನಾನು ಕೊಡಿಸಿದ್ದರೂ ಯಾವುದೇ ಸರ್ಕಾರಿ ಸೌಲಭ್ಯ ಪಡೆದುಕೊಂಡಿಲ್ಲ. ಚುನಾವಣೆಗೆ ಸ್ಪರ್ಧಿಸಲು ಮಾತ್ರ ಈ ಪ್ರಮಾಣಪತ್ರವನ್ನು ಬಳಸಿಕೊಂಡಿದ್ದೇನೆ’ ಎಂದು ಸಮರ್ಥಿಸಿಕೊಂಡರು.</p>.<p><strong>ದಾರಕೇಶ್ವರಯ್ಯಗೆ ಮುತ್ತಿಗೆ, ಪ್ರತಿಭಟನೆ</strong></p>.<p>ದಾವಣಗೆರೆ: ಎಂ.ಪಿ.ದಾರಕೇಶ್ವರಯ್ಯ ಅವರು ‘ಬೇಡ ಜಂಗಮ’ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದನ್ನು ಖಂಡಿಸಿ ಸಮುದಾಯದ ಮುಖಂಡರು ಸೋಮವಾರ ಮುತ್ತಿಗೆ, ಹಾಕಿ ಪ್ರತಿಭಟಿಸಿದರು.</p>.<p>ವಾಗ್ವಾದ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಪ್ರತಿಭಟನಕಾರರಿಂದ ದಾರಕೇಶ್ವರಯ್ಯ ಅವರನ್ನು ರಕ್ಷಿಸಿ ವಾಹನದಲ್ಲಿ ಕರೆದುಕೊಂಡು ಹೋದರು. ‘ಬೇಡ ಜಂಗಮ’ ಪ್ರಮಾಣಪತ್ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಹೊರಕ್ಕೆ ಬರುತ್ತಿದ್ದಂತೆ ಪರಿಶಿಷ್ಟ ಕಾರ್ಯಕರ್ತರು ಸುತ್ತುವರಿದು ಘೋಷಣೆಗಳನ್ನು ಕೂಗಿದರು.</p>.<p>ಆಗ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತ ತಲುಪಿತು. ವಾಹನ ತಡೆದ ಪ್ರತಿಭಟನಕಾರರು, ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ‘ದಲಿತರ ಹಕ್ಕನ್ನು ಕಿತ್ತುಕೊಂಡಿರುವ ರೇಣುಕಾಚಾರ್ಯ ಹಾಗೂ ದಾರಕೇಶ್ವರಯ್ಯ ಅವರನ್ನು ಬಂಧಿಸಬೇಕು’ ಎಂದು ಘೋಷಣೆ ಕೂಗಿದರು.</p>.<p>ಬಳಿಕ ಪೊಲೀಸರು ದಾರಕೇಶ್ವರಯ್ಯ ಅವರನ್ನು ಇನ್ನೊಂದು ವಾಹನದಲ್ಲಿ ಕರೆದುಕೊಂಡು ಹೋದರು. ಅರ್ಧ ಗಂಟೆಗೂ ಹೆಚ್ಚು ಹೊತ್ತು ದಾರಕೇಶ್ವರಯ್ಯ ಅವರು ಪೊಲೀಸ್ ವಾಹನದಲ್ಲೇ ದಿಗ್ಬಂಧನಕ್ಕೆ ಒಳಗಾಗಿದ್ದರು.</p>.<p>ಪರಿಶಿಷ್ಟ ಮುಖಂಡರಾದ ಹೂವಿನಮಡು ಅಂಜಿನಪ್ಪ, ಕಬ್ಬಳ್ಳಿ ಮೈಲಪ್ಪ, ಹೆಗ್ಗೆರೆ ರಂಗಪ್ಪ, ಡಿ. ಹನುಮಂತಪ್ಪ, ಆಟೊ ತಿಮ್ಮಣ್ಣ, ನೇರ್ಲಗಿ ರಾಜೇಶ್, ಬಾಡಾ ಶ್ರೀನಿವಾಸ್ ಪ್ರತಿಭಟನೆಯಲ್ಲಿದ್ದರು.</p>.<p><br /><strong>‘ಹಿಂದೂ ಲಿಂಗಾಯತ’ದಿಂದ ಬೇಡ ಜಂಗಮ’ ಹೇಗಾಯಿತು?</strong></p>.<p>ಹೊನ್ನಾಳಿ: ‘1966-67ರಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳಲ್ಲಿ ಜಾತಿ ‘ಹಿಂದೂ ಲಿಂಗಾಯತ’ ಎಂದಿದೆ. 2013-14ರಲ್ಲಿ ‘ಬೇಡ ಜಂಗಮ’ (ಎಸ್ಸಿ) ಆಗಿ ಬದಲಾಗಿದೆ. ಯಾರು, ಏಕೆ ಈ ಬದಲಾವಣೆ ಮಾಡಿದರು’ ಎಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಎಸ್ಸಿ, ಎಸ್ಟಿ ಪಂಗಡಗಳ ಮೀಸಲಾತಿ ಸಂರಕ್ಷಣಾ ಮಹಾ ಒಕ್ಕೂಟ ಪ್ರಶ್ನಿಸಿದೆ.</p>.<p>ಒಕ್ಕೂಟದ ಮುಖಂಡ ಕೊಡತಾಳ್ ರುದ್ರೇಶ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ, ಇದಕ್ಕೆ ಪೂರಕವಾಗಿ ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳ ಪ್ರತಿಗಳನ್ನು ಮಾಧ್ಯಮದವರಿಗೆ ಅವರು ತೋರಿಸಿದರು.</p>.<p>‘ಶಾಲಾ ದಾಖಲಾತಿಯಲ್ಲಿ ಬೇಡ ಜಂಗಮ (ಎಸ್ಸಿ) ಎಂದು ಬರೆಸಿದ್ದರೂ ನನಗೇನೂ ಗೊತ್ತಿಲ್ಲ ಎಂದು ಹೇಳುವ ರೇಣುಕಾಚಾರ್ಯ ಅವರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>