<p><strong>ಚಿತ್ರದುರ್ಗ: </strong>ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್.ದರ್ಶನ್ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿ ಕಳುಹಿಸಿದ್ದಾರೆ. ಹಾಗಾದ್ರೆ ₹ 10 ಸಾವಿರ ಇರುವವರು ಏನ್ ಬೇಕಾದ್ರು ಮಾಡ್ಬಹುದಾ...?’ ಎಂಬ ಸಂದೇಶವನ್ನು ‘ಚಿತ್ರದುರ್ಗ ಟ್ರೋಲ್ಸ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆರೋಪಿ ಹಂಚಿಕೊಂಡಿದ್ದನು. ಇದು ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>‘ಐಪಿಸಿ ಕಲಂ 505ರ ಪ್ರಕಾರ ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುವುದು ಅಪರಾಧ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಹೇಳಿಕೆ, ವದಂತಿ ಹಬ್ಬಿಸಿದರೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಈ ರೀತಿಯ ವದಂತಿಯನ್ನು ಹಬ್ಬಿಸಬಾರದು. ತಪ್ಪು ಮಾಹಿತಿ ಇರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು. ಇಂತಹ ಸಂದೇಶ ಕಂಡುಬಂದರೆ ಪೊಲೀಸರ ಗಮನಕ್ಕೆ ತರಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಇವನ್ನೂ ಓದಿ</strong><br />*<a href="https://cms.prajavani.net/district/chitradurga/unreleased-grant-due-to-child-sacrifice-852061.html" itemprop="url" target="_blank">ಚಿತ್ರದುರ್ಗ: ಬಾಲಕಿ ಬಲಿಗೆ ಕಾರಣವಾಯಿತೇ ಬಿಡುಗಡೆಯಾಗದ ಅನುದಾನ?</a><br />*<a href="https://cms.prajavani.net/district/chitradurga/rape-on-a-girl-the-condemnation-of-the-swamijis-852062.html" itemprop="url" target="_blank">ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿಗಳ ಖಂಡನೆ</a><br />*<a href="https://cms.prajavani.net/district/chitradurga/the-mug-was-chested-slipperylying-down-face-covered-852059.html" itemprop="url" target="_blank">ಅತ್ಯಾಚಾರ ಪ್ರಕರಣ: ‘ಚೊಂಬು ನೆಗ್ಗಿತ್ತು, ಚಪ್ಪಲಿ ಬಿದ್ದಿತ್ತು, ಮುಖ ಹುದುಗಿತ್ತು...’</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್.ದರ್ಶನ್ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿ ಕಳುಹಿಸಿದ್ದಾರೆ. ಹಾಗಾದ್ರೆ ₹ 10 ಸಾವಿರ ಇರುವವರು ಏನ್ ಬೇಕಾದ್ರು ಮಾಡ್ಬಹುದಾ...?’ ಎಂಬ ಸಂದೇಶವನ್ನು ‘ಚಿತ್ರದುರ್ಗ ಟ್ರೋಲ್ಸ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆರೋಪಿ ಹಂಚಿಕೊಂಡಿದ್ದನು. ಇದು ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ನಲ್ಲಿ ಹರಿದಾಡಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>‘ಐಪಿಸಿ ಕಲಂ 505ರ ಪ್ರಕಾರ ಯಾವುದೇ ವ್ಯಕ್ತಿಯು ಸಾರ್ವಜನಿಕರಿಗೆ ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುವುದು ಅಪರಾಧ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಹೇಳಿಕೆ, ವದಂತಿ ಹಬ್ಬಿಸಿದರೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಈ ರೀತಿಯ ವದಂತಿಯನ್ನು ಹಬ್ಬಿಸಬಾರದು. ತಪ್ಪು ಮಾಹಿತಿ ಇರುವ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು. ಇಂತಹ ಸಂದೇಶ ಕಂಡುಬಂದರೆ ಪೊಲೀಸರ ಗಮನಕ್ಕೆ ತರಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಇವನ್ನೂ ಓದಿ</strong><br />*<a href="https://cms.prajavani.net/district/chitradurga/unreleased-grant-due-to-child-sacrifice-852061.html" itemprop="url" target="_blank">ಚಿತ್ರದುರ್ಗ: ಬಾಲಕಿ ಬಲಿಗೆ ಕಾರಣವಾಯಿತೇ ಬಿಡುಗಡೆಯಾಗದ ಅನುದಾನ?</a><br />*<a href="https://cms.prajavani.net/district/chitradurga/rape-on-a-girl-the-condemnation-of-the-swamijis-852062.html" itemprop="url" target="_blank">ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿಗಳ ಖಂಡನೆ</a><br />*<a href="https://cms.prajavani.net/district/chitradurga/the-mug-was-chested-slipperylying-down-face-covered-852059.html" itemprop="url" target="_blank">ಅತ್ಯಾಚಾರ ಪ್ರಕರಣ: ‘ಚೊಂಬು ನೆಗ್ಗಿತ್ತು, ಚಪ್ಪಲಿ ಬಿದ್ದಿತ್ತು, ಮುಖ ಹುದುಗಿತ್ತು...’</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>