2018ರಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಎನ್. ಆನಂದಕುಮಾರ್ ಮತ್ತು ಜಿ. ಸಂತೋಷ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ಈಗಾಗಲೇ ಸಲ್ಲಿಸಿರುವ ಆರೋಪಪಟ್ಟಿ ಮತ್ತು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯನ್ನು ನಿಯೋಜಿಸುವಂತೆ ನಿರ್ದೇಶನ ನೀಡಿತು.