<p><strong>ಬೆಂಗಳೂರು</strong>: ‘ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿರುವುದಾಗಿ ಸುಳ್ಳು ಮಾಹಿತಿ ಮುಂದಿಟ್ಟಿದ್ದಾರೆ’ ಎಂದು ಟೀಕಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹೊಸ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ.</p>.<p>‘ಕರ್ನಾಟಕ ಪ್ರತಿವರ್ಷ ಅಂದಾಜು ₹ 2.20 ಸಾವಿರ ಕೋಟಿ ತೆರಿಗೆ-ಸುಂಕ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಈ ಹಣದಲ್ಲಿ ಶೇ 42ರಷ್ಟನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಿಂದಿರುಗಿಸಬೇಕು. ಆದರೆ, ಬಿಜೆಪಿ ಆಡಳಿತದ ಕಾಲದಲ್ಲಿ ಎಂದೂ ಶೇ 42ರಷ್ಟು ಪಾಲು ಸಿಕ್ಕಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ಯುಪಿಎ ಅವಧಿಯಲ್ಲಿ (2010–14) ಹಣಕಾಸು ಆಯೋಗ ಕರ್ನಾಟಕಕ್ಕೆ ತೆರಿಗೆಗಳ ಪಾಲು ₹ 45,713 ಕೋಟಿ ನಿಗದಿಪಡಿಸಿತ್ತು. ನಾವು ಪಡೆದದ್ದು ₹ 47,036 ಕೋಟಿ. ಇದು ₹ 1.323 ಕೋಟಿ (ಶೇ 2.9ರಷ್ಟು) ಹೆಚ್ಚು. ಎನ್ಡಿಎ ಅವಧಿಯಲ್ಲಿ (2014–20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ₹ 2,03,039 ಕೋಟಿ, ಸಿಕ್ಕಿದ್ದು ಕೇವಲ ₹ 1,65 963 ಕೋಟಿ (ಶೇ 18.2ರಷ್ಟು)’ ಎಂದಿದ್ದಾರೆ.</p>.<p>‘ರಾಜ್ಯ ಬಜೆಟ್ ಪ್ರಕಾರ 2010-21ನೇ ಹಣಕಾಸು ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ₹ 28,591 ಕೋಟಿ. ಪ್ರಸಕ್ತ ವರ್ಷ ₹ 15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ, 2019-20ರಲ್ಲಿ ನಿರೀಕ್ಷೆಗಿಂತ ₹ 33,751 ಕೋಟಿ ಇಲ್ಲವೇ ರಾಜ್ಯ ಬಜೆಟ್ ಅಂದಾಜಿಗಿಂತ ₹ 24,789 ಕೋಟಿಯಷ್ಟು ಕಡಿಮೆಯಾಗುತ್ತದೆ. ಜಿಎಸ್ಟಿ ಪರಿಹಾರದಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಜಿಎಸ್ಟಿ ಪರಿಹಾರದಲ್ಲಿ ಅಂದಾಜು ₹ 27 ಸಾವಿರ ಕೋಟಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ ₹ 19 ಸಾವಿರ ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ’ ಎಂದಿದ್ದಾರೆ.</p>.<p>‘ರಾಜ್ಯಕ್ಕೆ ಕೇಂದ್ರ ನೀಡಲಿರುವ ಅನುದಾನ ₹ 31,570 ಕೋಟಿ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ₹ 17,372 ಕೋಟಿ ಆಗಬಹುದು. ಇದರಿಂದ ₹ 14,198 ಕೋಟಿ ಖೋತಾ ಆಗಲಿದೆ’ ಎಂದೂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಆರ್ಥಿಕ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ವಿಶೇಷ ಅನುದಾನದವಾಗಿ ₹ 5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಇದಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ. ಈ ವರ್ಷ ಸುಮಾರು ₹ 90 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ತಿರುಚಿದ ಅಂಕಿಅಂಶಗಳನ್ನು ಮುಂದಿಟ್ಟು ಆರೋಪ ಮಾಡುವ ಮೊದಲು ಶಾ ಮತ್ತೊಮ್ಮೆ ತಮ್ಮ ಹೋಂ ವರ್ಕ್ ಸರಿಯಾಗಿ ಮಾಡಿಕೊಂಡು ಬರಲಿ’ ಎಂದೂ ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿರುವುದಾಗಿ ಸುಳ್ಳು ಮಾಹಿತಿ ಮುಂದಿಟ್ಟಿದ್ದಾರೆ’ ಎಂದು ಟೀಕಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹೊಸ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ.</p>.<p>‘ಕರ್ನಾಟಕ ಪ್ರತಿವರ್ಷ ಅಂದಾಜು ₹ 2.20 ಸಾವಿರ ಕೋಟಿ ತೆರಿಗೆ-ಸುಂಕ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಈ ಹಣದಲ್ಲಿ ಶೇ 42ರಷ್ಟನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಿಂದಿರುಗಿಸಬೇಕು. ಆದರೆ, ಬಿಜೆಪಿ ಆಡಳಿತದ ಕಾಲದಲ್ಲಿ ಎಂದೂ ಶೇ 42ರಷ್ಟು ಪಾಲು ಸಿಕ್ಕಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>‘ಯುಪಿಎ ಅವಧಿಯಲ್ಲಿ (2010–14) ಹಣಕಾಸು ಆಯೋಗ ಕರ್ನಾಟಕಕ್ಕೆ ತೆರಿಗೆಗಳ ಪಾಲು ₹ 45,713 ಕೋಟಿ ನಿಗದಿಪಡಿಸಿತ್ತು. ನಾವು ಪಡೆದದ್ದು ₹ 47,036 ಕೋಟಿ. ಇದು ₹ 1.323 ಕೋಟಿ (ಶೇ 2.9ರಷ್ಟು) ಹೆಚ್ಚು. ಎನ್ಡಿಎ ಅವಧಿಯಲ್ಲಿ (2014–20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ₹ 2,03,039 ಕೋಟಿ, ಸಿಕ್ಕಿದ್ದು ಕೇವಲ ₹ 1,65 963 ಕೋಟಿ (ಶೇ 18.2ರಷ್ಟು)’ ಎಂದಿದ್ದಾರೆ.</p>.<p>‘ರಾಜ್ಯ ಬಜೆಟ್ ಪ್ರಕಾರ 2010-21ನೇ ಹಣಕಾಸು ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ₹ 28,591 ಕೋಟಿ. ಪ್ರಸಕ್ತ ವರ್ಷ ₹ 15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ, 2019-20ರಲ್ಲಿ ನಿರೀಕ್ಷೆಗಿಂತ ₹ 33,751 ಕೋಟಿ ಇಲ್ಲವೇ ರಾಜ್ಯ ಬಜೆಟ್ ಅಂದಾಜಿಗಿಂತ ₹ 24,789 ಕೋಟಿಯಷ್ಟು ಕಡಿಮೆಯಾಗುತ್ತದೆ. ಜಿಎಸ್ಟಿ ಪರಿಹಾರದಲ್ಲಿಯೂ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಜಿಎಸ್ಟಿ ಪರಿಹಾರದಲ್ಲಿ ಅಂದಾಜು ₹ 27 ಸಾವಿರ ಕೋಟಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ ₹ 19 ಸಾವಿರ ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ’ ಎಂದಿದ್ದಾರೆ.</p>.<p>‘ರಾಜ್ಯಕ್ಕೆ ಕೇಂದ್ರ ನೀಡಲಿರುವ ಅನುದಾನ ₹ 31,570 ಕೋಟಿ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ₹ 17,372 ಕೋಟಿ ಆಗಬಹುದು. ಇದರಿಂದ ₹ 14,198 ಕೋಟಿ ಖೋತಾ ಆಗಲಿದೆ’ ಎಂದೂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಆರ್ಥಿಕ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ವಿಶೇಷ ಅನುದಾನದವಾಗಿ ₹ 5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಇದಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ. ಈ ವರ್ಷ ಸುಮಾರು ₹ 90 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ತಿರುಚಿದ ಅಂಕಿಅಂಶಗಳನ್ನು ಮುಂದಿಟ್ಟು ಆರೋಪ ಮಾಡುವ ಮೊದಲು ಶಾ ಮತ್ತೊಮ್ಮೆ ತಮ್ಮ ಹೋಂ ವರ್ಕ್ ಸರಿಯಾಗಿ ಮಾಡಿಕೊಂಡು ಬರಲಿ’ ಎಂದೂ ವ್ಯಂಗ್ಯವಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>