<p><strong>ಸಂತೇಬೆನ್ನೂರು: </strong>ಮಗಳ ವಿವಾಹ ಕೌಟುಂಬಿಕ ಕಲಹದಿಂದಾಗಿ ಬೇಸತ್ತು ತಾಯಿ, ಮಗಳು, ಮಗ ಸಮೀಪದ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಚನ್ನಗಿರಿ ಸಮೀಪದ ಮರವಂಜಿ ಗ್ರಾಮದ ನಿವಾಸಿಗಳಾದ ನಿವೃತ್ತ ಶಿಕ್ಷಕ ರಾಜಪ್ಪ ಅವರ ಪತ್ನಿ ಕಮಲಮ್ಮ(50)ಮಗಳು ಶ್ರುತಿ(24) ಹಾಗೂ ಮಗ ಸಂಜಯ್(20) ಮೃತಪಟ್ಟವರು.</p>.<p>ರಾಜ್ಯಶಾಸ್ತ್ರದಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಮುಗಿಸಿದ್ದ ಮಗಳು ಶ್ರುತಿ ಅವರ ಮದುವೆಗೆ ತಂದೆ ರಾಜಪ್ಪ ವರನನ್ನು ಹುಡುಕುತ್ತಿದ್ದರು.</p>.<p>ಶ್ರುತಿ ಅವರು ಬಂದ ಸಂಬಂಧಗಳನ್ನು ಒಪ್ಪದ ಕಾರಣ ಕುಟುಂಬದಲ್ಲಿ ಮನಸ್ತಾಪ ಉಂಟಾಗಿದೆ.ಇದರಿಂದ ನೊಂದ ತಾಯಿ, ಮಗಳು ಬುಧವಾರ ಮನೆಯಿಂದ ನಾಪತ್ತೆಯಾಗಿದ್ದರು. ಇವರನ್ನು ಹುಡುಕುತ್ತಾ ಬಂದ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಸಂಜಯ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು.</p>.<p>ಶ್ರುತಿ ಅವರ ಮೃತ ದೇಹ ಗುರುವಾರ ಸಂತೇಬೆನ್ನೂರು ಸಮೀಪದ ಮೆದಿಕೆರೆ ಬಳಿ ಪತ್ತೆಯಾಗಿದೆ. ಸಂಜಯ್ ಅವರ ಮೃತ ದೇಹ ಶುಕ್ರವಾರ ಯಕ್ಕೆಗೊಂದಿ ಭದ್ರಾನಾಲೆಯಲ್ಲಿ ಸಿಕ್ಕಿದೆ. ಕಮಲಮ್ಮ ಅವರ ಮೃತ ದೇಹಕ್ಕಾಗಿ ಶೋಧ ನಡೆಯುತ್ತಿದೆ.</p>.<p>ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು: </strong>ಮಗಳ ವಿವಾಹ ಕೌಟುಂಬಿಕ ಕಲಹದಿಂದಾಗಿ ಬೇಸತ್ತು ತಾಯಿ, ಮಗಳು, ಮಗ ಸಮೀಪದ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಚನ್ನಗಿರಿ ಸಮೀಪದ ಮರವಂಜಿ ಗ್ರಾಮದ ನಿವಾಸಿಗಳಾದ ನಿವೃತ್ತ ಶಿಕ್ಷಕ ರಾಜಪ್ಪ ಅವರ ಪತ್ನಿ ಕಮಲಮ್ಮ(50)ಮಗಳು ಶ್ರುತಿ(24) ಹಾಗೂ ಮಗ ಸಂಜಯ್(20) ಮೃತಪಟ್ಟವರು.</p>.<p>ರಾಜ್ಯಶಾಸ್ತ್ರದಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಮುಗಿಸಿದ್ದ ಮಗಳು ಶ್ರುತಿ ಅವರ ಮದುವೆಗೆ ತಂದೆ ರಾಜಪ್ಪ ವರನನ್ನು ಹುಡುಕುತ್ತಿದ್ದರು.</p>.<p>ಶ್ರುತಿ ಅವರು ಬಂದ ಸಂಬಂಧಗಳನ್ನು ಒಪ್ಪದ ಕಾರಣ ಕುಟುಂಬದಲ್ಲಿ ಮನಸ್ತಾಪ ಉಂಟಾಗಿದೆ.ಇದರಿಂದ ನೊಂದ ತಾಯಿ, ಮಗಳು ಬುಧವಾರ ಮನೆಯಿಂದ ನಾಪತ್ತೆಯಾಗಿದ್ದರು. ಇವರನ್ನು ಹುಡುಕುತ್ತಾ ಬಂದ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಸಂಜಯ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು.</p>.<p>ಶ್ರುತಿ ಅವರ ಮೃತ ದೇಹ ಗುರುವಾರ ಸಂತೇಬೆನ್ನೂರು ಸಮೀಪದ ಮೆದಿಕೆರೆ ಬಳಿ ಪತ್ತೆಯಾಗಿದೆ. ಸಂಜಯ್ ಅವರ ಮೃತ ದೇಹ ಶುಕ್ರವಾರ ಯಕ್ಕೆಗೊಂದಿ ಭದ್ರಾನಾಲೆಯಲ್ಲಿ ಸಿಕ್ಕಿದೆ. ಕಮಲಮ್ಮ ಅವರ ಮೃತ ದೇಹಕ್ಕಾಗಿ ಶೋಧ ನಡೆಯುತ್ತಿದೆ.</p>.<p>ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>