ಕವಿ ಲಕ್ಷ್ಮೀನಾರಾಯಣ ಭಟ್ಟ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಜನಪ್ರಿಯ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಪ್ರೀತಿಯ ಒರತೆ ಭಾವಗೀತೆ: ಲಕ್ಷ್ಮೀನಾರಾಯಣ ಭಟ್ಟ
ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. (1/2)
— CM of Karnataka (@CMofKarnataka) March 6, 2021
ನೋಡಿ: ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಕುರಿತ ಸಾಕ್ಷ್ಯಚಿತ್ರ
ʼನಾಡಿನ ಖ್ಯಾತ ಕವಿ ಎನ್.ಎಸ್ ಲಕ್ಷ್ಮಿನಾರಾಯಣ ಭಟ್ ಅವರು ವಿಧಿವಶರಾದದ್ದು ದುಃಖದ ಸಂಗತಿ. ಭಾವಗೀತೆಗಳ ಲೋಕದ ಭಾವುಕ ಕವಿ ಇನ್ನಿಲ್ಲ ಎಂಬುದು ನಾಡಿನ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಭಾವಸಾರವನ್ನೆ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಾಡಿನ ಖ್ಯಾತ ಕವಿ ಎನ್.ಎಸ್ ಲಕ್ಷ್ಮಿನಾರಾಯಣ ಭಟ್ ಅವರು ವಿಧಿವಶರಾದದ್ದು ದುಃಖದ ಸಂಗತಿ.
ಭಾವಗೀತೆಗಳ ಲೋಕದ ಭಾವುಕ ಕವಿ ಇನ್ನಿಲ್ಲ ಎಂಬುದು ನಾಡಿನ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಭಾವಸಾರವನ್ನೆ ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿ.
1/2— H D Kumaraswamy (@hd_kumaraswamy) March 6, 2021
ಇದನ್ನೂ ಓದಿ: ಜನಪ್ರಿಯ ಕವಿ ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟ ನಿಧನ
ಸಚಿವ ಅರವಿಂದ ಲಿಂಬಾವಳಿ ಅವರು, ಕನ್ನಡದ ಜನಪ್ರಿಯ ಕವಿಗಳು, ʼಆಧುನಿಕ ಕನ್ನಡ ಕಾವ್ಯ ಪರಂಪರೆಗೆ ಅತಿದೊಡ್ಡ ಕೊಡುಗೆ ನೀಡಿದ್ದ ಹಿರಿಯ ಸಾಹಿತಿ ಶ್ರೀ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ರವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿʼ ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡದ ಜನಪ್ರಿಯ ಕವಿಗಳು, ಆಧುನಿಕ ಕನ್ನಡ ಕಾವ್ಯ ಪರಂಪರೆಗೆ ಅತಿದೊಡ್ಡ ಕೊಡುಗೆ ನೀಡಿದ್ದ ಹಿರಿಯ ಸಾಹಿತಿ ಶ್ರೀ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ರವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಿ, 1/4 pic.twitter.com/g3GKC7pm1d
— Aravind Limbavali (@ArvindLBJP) March 6, 2021
ಇದನ್ನೂ ಓದಿ: ಲಕ್ಷ್ಮೀನಾರಾಯಣ ಭಟ್ಟರ 10 ಜನಪ್ರಿಯ ಭಾವಗೀತೆಗಳು..
ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥನಾರಾಯಣ ಅವರು, ʼಖ್ಯಾತ ಸಾಹಿತಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿ ನೋವು ತಂದಿದೆ. ತಮ್ಮ ಭಾವಗೀತೆಗಳ ಮೂಲಕ ನಾಡಿನ ಜನಮನ ತಲುಪಿದ 'ಎನ್ಎಸ್ಎಲ್ʼ ಅವರಿಗೆ ನನ್ನ ಭಾವಪೂರ್ಣ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.
ಖ್ಯಾತ ಸಾಹಿತಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿ ನೋವು ತಂದಿದೆ.
ತಮ್ಮ ಭಾವಗೀತೆಗಳ ಮೂಲಕ ನಾಡಿನ ಜನಮನ ತಲುಪಿದ 'ಎನ್ನೆಸ್ಸೆಲ್' ಅವರಿಗೆ ನನ್ನ ಭಾವಪೂರ್ಣ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ pic.twitter.com/MRqpRDgoLw
— Dr. Ashwathnarayan C. N. (@drashwathcn) March 6, 2021
ಇದನ್ನೂ ಓದಿ: ಕೆ.ವಿ.ತಿರುಮಲೇಶ್ ಬರಹ: ಎನ್.ಎಸ್.ಎಲ್. ಮತ್ತು ಶೇಕ್ಸ್ಪಿಯರನ ಸುನೀತಮಾಲೆ
ʼಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಾದ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ವಿಧಿವಶರಾದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆʼ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ಹಿರಿಯ ಸಾಹಿತಿಗಳಾದ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರು ವಿಧಿವಶರಾದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು.
ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. pic.twitter.com/8TcHIqCUAG
— GT Devegowda (@GTDevegowda) March 6, 2021
ಭಾವಗೀತೆ, ಬಾಲಗೀತೆಗಳ ರಚನಾಕಾರರ, ಸಾಹಿತ್ಯ ವಿಮರ್ಶಕ ಎಂದೇ ಪ್ರಸಿದ್ಧರಾದ ಕನ್ನಡದ ಜನಪ್ರಿಯ ಕವಿ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ.
ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸೋಣ.ಓಂ ಶಾಂತಿ. pic.twitter.com/dEdKH5Gwjq
— S A Ramadass (@ramadassmysuru) March 6, 2021
ಖ್ಯಾತ ಕವಿ ಶ್ರೀ ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ...
Posted by Dr.K Sudhakar on Friday, 5 March 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.