‘ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಎಲ್ಲ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿವೆ. ಸಂಘಟನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬೆಂಗಳೂರಿನ ಹೊರವಲಯಗಳಾದ ನಾಯಂಡಹಳ್ಳಿ, ಗೊರಗುಂಟೆಪಾಳ್ಯ ಬಳಿಯ ಹೆದ್ದಾರಿಗಳಲ್ಲಿ ವಾಹನಗಳ ಸಂಚಾರ ತಡೆಯಲಾಗುತ್ತದೆ. ಅಲ್ಲದೆ, ಆಯಾ ಜಿಲ್ಲಾ ಕೇಂದ್ರಗಳ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ತಡೆದು ಪ್ರತಿಭಟಿಸಲಾಗುವುದು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.