ಮೈಸೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮೈಸೂರಿನ ಗನ್ ಹೌಸ್ ನಿಂದ ಮೆರವಣಿಗೆ ಹೊರಟರು. ದೇವರಾಜ ಅರಸು ರಸ್ತೆ ಸಂತೇಪೇಟೆ ಚಿಕ್ಕಗಡಿಯಾರ ಧನ್ವಂತರಿ ರಸ್ತೆ ಜೆ ಎಲ್ ಬಿ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು
ಶ್ರೀರಂಗಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು
ಕೊಪ್ಪಳ: ಮೂರು ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡದ್ದ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂಗಡಿ ಮುಂಗುಟ್ಟುಗಳು ವಾಹನಗಳು ಎಂದಿನಂತೆ ಸಂಚಾರ ಆರಂಭಿಸಿದ್ದವು.
ಪ್ರತಿಭಟನಾಕಾರರು ಊರು ಸುತ್ತಿ ಅಂಗಡಿಗಳನ್ನು ಬಂದ್ ಮಾಡಿಸಲು ಬಂದಾಗ ವ್ಯಾಪಾರಸ್ಥರ ಜೊತೆ ವಾಗ್ವಾದ ನಡೆಯಿತು
ವಿವಿಧ ಸಂಘಟನೆಗಳ ಸದಸ್ಯರು ಮಂಡ್ಯದ ಜೆ.ಸಿ ವೃತ್ತದಲ್ಲಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು
ಶಿರಸಿ: ಕೃಷಿ ತಿದ್ದುಪಡಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಒತ್ತಾಯಿಸಿ ಕರೆ ನೀಡಲಾಗಿದ್ದ ಬಂದ್ ಗೆ ನಗರದಲ್ಲಿ ಸ್ಪಂದನೆ ಸಿಗಲಿಲ್ಲ. ಅಂಗಡಿ ಮುಂಗಟ್ಟುಗಳು ತೆರದಿದ್ದವು. ಸಂಚಾರ ಸಹಜವಾಗಿತ್ತು.
ರಾಮನಗರದಲ್ಲಿ ರೈತ ಸಂಘದ ನೇತೃತ್ವದಲ್ಲಿ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಯಿತು. ಎಪಿಎಂಸಿ ಆವರಣದಿಂದ ಐಜೂರು ವೃತ್ತದ ವರೆಗೆ ಮೆರವಣಿಗೆ ಹೊರಟ ರೈತರು , ಐಜೂರು ವೃತ್ತದಲ್ಲಿ ರಸ್ತೆ ತಡೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಕಲಬುರ್ಗಿ ಜಿಲ್ಲಾ ಘಟಕದಿಂದ ಸೋಮವಾರ ಎಸ್.ವಿ.ಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು
ರಾಮನಗರದಲ್ಲಿ ರೈತ ಸಂಘದ ನೇತೃತ್ವದಲ್ಲಿ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಯಿತು. ಎಪಿಎಂಸಿ ಆವರಣದಿಂದ ಐಜೂರು ವೃತ್ತದ ವರೆಗೆ ಮೆರವಣಿಗೆ ಹೊರಟ ರೈತರು , ಐಜೂರು ವೃತ್ತದಲ್ಲಿ ರಸ್ತೆ ತಡೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು