ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ​ಕಿಸಾನ್‌ ಮೋರ್ಚಾದಿಂದ 27 ರಂದು ಕರ್ನಾಟಕ ಬಂದ್

Last Updated 11 ಸೆಪ್ಟೆಂಬರ್ 2021, 8:21 IST
ಅಕ್ಷರ ಗಾತ್ರ

ಮೈಸೂರು: ‘ರಾಷ್ಟ್ರೀಯ ಸಂಯುಕ್ತ ಕಿಸಾನ್‌ ಮೋರ್ಚಾ ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕ ಸಂಯುಕ್ತ ಕಿಸಾನ್‌ ಮೋರ್ಚಾ ವತಿಯಿಂದ ರಾಜ್ಯದಲ್ಲೂ ಬಂದ್‌ ನಡೆಯಲಿದೆ’ ಎಂದು ಮೋರ್ಚಾದ ಮುಖ್ಯಸ್ಥ ಕುರುಬೂರು ಶಾಂತಕುಮಾರ್‌ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೇಂದ್ರದ ಮೂರು ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ನಿಗದಿಗೆ ಒತ್ತಾಯಿಸಿ, ಅಡುಗೆ ಅನಿಲ, ಇಂಧನ ಮತ್ತು ರಸಗೊಬ್ಬರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿ ಬಂದ್‌ ನಡೆಸಲಾಗುವುದು. ದೇಶದ 500ಕ್ಕೂ ಅಧಿಕ ರೈತ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿದ್ದು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳೂ ಕೈಜೋಡಿಸಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT