ಮಧ್ಯಾಹ್ನ 2.15ರ ಸುಮಾರಿಗೆ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದ ಸ್ಥಳಕ್ಕೆ ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ ತಂಡವು ಬಂದಾಗ ವರುಣನ ಅಬ್ಬರ ಆರಂಭವಾಯಿತು. ಮಳೆಯಿಂದಾಗಿ, ಅಧಿಕಾರಿಗಳು ಕೆಲವೇ ನಿಮಿಷಗಳಲ್ಲಿ ಅಧ್ಯಯನ ಮುಗಿಸಿ, ಕಾರನ್ನೇರಿ ಹೊರಟರು. ಗಜಗಿರಿ ಬೆಟ್ಟ ಕುಸಿತದಿಂದ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿ ಐವರು ಮೃತಪಟ್ಟಿದ್ದರು.